ತಿರುಪತಿ ತಿರುಮಲ ಆವರಣದಲ್ಲಿ ರಾಜಕೀಯ ಹೇಳಿಕೆ ನೀಡಿದರೆ ಕಾನೂನು ಕ್ರಮ! ಟಿಟಿಡಿ ನಿರ್ಬಂಧ

KannadaprabhaNewsNetwork |  
Published : Dec 01, 2024, 01:35 AM ISTUpdated : Dec 01, 2024, 07:26 AM IST
ತಿರುಮಲ | Kannada Prabha

ಸಾರಾಂಶ

 ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್‌(ಟಿಟಿಡಿ) ನಿರ್ಬಂಧ ವಿಧಿಸಿದೆ.

ತಿರುಮಲ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್‌(ಟಿಟಿಡಿ) ನಿರ್ಬಂಧ ವಿಧಿಸಿದೆ. ಒಂದು ವೇಳೆ ತಿರುಮಲ ಆವರಣದಲ್ಲಿ ಈ ರೀತಿಯ ರಾಜಕೀಯ ಹೇಳಿಕೆಯನ್ನು ನೀಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಟಿಟಿಡಿ ಹೇಳಿಕೆ ನೀಡಿದ್ದು, ‘ಯಾವಾಗಲೂ ಗೋವಿಂದ ನಾಮ ಸ್ಮರಣೆ ಮೊಳಗುವ ಪವಿತ್ರ ತಿರುಮಲ ದೈವಿಕ ದೇಗುಲದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವು ವ್ಯಕ್ತಿಗಳು, ರಾಜಕೀಯ ಮುಖಂಡರು ದರ್ಶನ ಪಡೆದ ಬಳಿಕ ದೇವಸ್ಥಾನದ ಆವರಣದಲ್ಲಿಯೇ ರಾಜಕೀಯ ಮತ್ತು ದ್ವೇಷದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ತಿರುಪತಿಯಲ್ಲಿ ಆಧ್ಯಾತ್ಮದ ವಾತಾವರಣವನ್ನು ಹಾಳು ಮಾಡುತ್ತಿದೆ. ಈ ರೀತಿ ಮಾಡುವವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ’ ಎಂದಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಲಿವ್‌-ಇನ್‌ ಗೆಳತಿ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ
ಸಂಸದೆಯರ ಮುಂದೆಬಿಟ್ಟು ಪ್ರಧಾನಿ ಆಗಬೇಕೆ ? : ಮೋದಿ