ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

KannadaprabhaNewsNetwork |  
Published : Oct 31, 2023, 01:16 AM IST
ಕಂಟಕಪಲ್ಲಿ ರೈಲು ದುರಂತ | Kannada Prabha

ಸಾರಾಂಶ

ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಸಿಎಂ ಜಗನ್‌ ಭೇಟಿ.

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಹೌರಾ- ಚೆನ್ನೈ ಮಾರ್ಗದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಈ ದುರಂತದಲ್ಲಿ ಗಾಯಗೊಂಡವರ ಸಂಖ್ಯೆ 50ಕ್ಕೇರಿದೆ. ‘13 ಮಂದಿ ದುರಂತ ನಡೆದ ಸ್ಥಳದಲ್ಲಿ ಮೃತಪಟ್ಟಿದ್ದರೆ ಮತ್ತೊಬ್ಬ ವ್ಯಕ್ತಿ ಚಿಕಿತ್ಸೆಯ ಸಮಯದಲ್ಲಿ ಅಸುನೀಗಿದ್ದಾರೆ. ಈ ದುರ್ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದಾರೆ’ ಎಂದು ವಿಜಯನಗರಂ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಮಯೂರ್‌ ಅಶೋಕ್‌ ಹೇಳಿದ್ದಾರೆ. ಗಾಯಗೊಂಡವರನ್ನು ವಿಶಾಖಪಟ್ಟಣ ಮತ್ತು ವಿಜಯನಗರಂನಲ್ಲಿರುವ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಈ ದುರ್ಘಟನೆಯಲ್ಲಿ ಪಲಾಸಾ ಪ್ಯಾಸೆಂಜರ್‌ ರೈಲಿನ ಗಾರ್ಡ್‌ ಎಂ.ಎಸ್‌.ರಾವ್‌ ಮತ್ತು ರಾಯಗಢ ರೈಲಿನ ಲೋಕೋಪೈಲಟ್‌ ಎಸ್‌.ಎಂ.ಎಸ್‌. ರಾವ್‌ ಹಾಗೂ ಸಹಾಯಕ ಲೋಕೋಪೈಲಟ್‌ ಚಿರಂಜೀವಿ ಸಾವಿಗೀಡಾಗಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಜಗನ್‌: ರೈಲು ದುರಂತದಲ್ಲಿ ಗಾಯಗೊಂಡವರನ್ನು ದಾಖಲಿಸಲಾಗಿರುವ ವಿಜಯನಗರಂ ಜಿಲ್ಲೆಗೆ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಶೀಘ್ರದಲ್ಲೇ ಆಲ್ಕೋಹಾಲ್‌ನಿಂದ ಓಡಾಡಲಿವೆ ಭಾರತದ ಕಾರುಗಳು
ಪುರುಷರ ಕೋಣೆಗೆ ಹೋಗ್ದೆ ಸ್ತ್ರೀ ರಾಜಕಾರಣಿಗಳು ಯಶಸ್ವಿ ಆಗಲ್ಲ: ಪಪ್ಪು