ವೈಎಸ್‌ಆರ್‌ ಅವಧಿಯಲ್ಲಿ ರಚನೆಯಾಗಿದ್ದ ಆಂಧ್ರ ವಕ್ಫ್‌ ಬೋರ್ಡ್‌ ಆಡಳಿತ ಮಂಡಳಿ ವಿಸರ್ಜನೆ

KannadaprabhaNewsNetwork |  
Published : Dec 02, 2024, 01:20 AM ISTUpdated : Dec 02, 2024, 04:39 AM IST
ವಕ್ಫ್‌ | Kannada Prabha

ಸಾರಾಂಶ

ಈ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ಆಂಧ್ರ ವಕ್ಫ್‌ ಬೋರ್ಡ್‌ದ ಆಡಳಿತ ಮಂಡಳಿಯನ್ನು ಬಿಜೆಪಿ ಮೈತ್ರಿಕೂಟದ ಭಾಗವಾಗಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ಇದೀಗ ವಿಸರ್ಜನೆ ಮಾಡಿದೆ. 

ಅಮರಾವತಿ: ಈ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ಆಂಧ್ರ ವಕ್ಫ್‌ ಬೋರ್ಡ್‌ದ ಆಡಳಿತ ಮಂಡಳಿಯನ್ನು ಬಿಜೆಪಿ ಮೈತ್ರಿಕೂಟದ ಭಾಗವಾಗಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ಇದೀಗ ವಿಸರ್ಜನೆ ಮಾಡಿದೆ. ಶೀಘ್ರದಲ್ಲೇ ಹೊಸ ವಕ್ಫ್‌ ಬೋರ್ಡ್‌ ರಚಿಸುವುದಾಗಿ ಘೋಷಿಸಿದೆ.

ಉತ್ತಮ ಆಡಳಿತ, ವಕ್ಫ್‌ ಆಸ್ತಿಗಳ ರಕ್ಷಣೆ, ವಕ್ಫ್‌ ಮಂಡಳಿಯ ಸುಗಮ ಕಾರ್ಯಾಚರಣೆಗೆ ಪೂರಕವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ವಿಸರ್ಜನೆ ಏಕೆ?: 

ಹಳೆಯ ವಕ್ಫ್‌ ಮಂಡಳಿಯಲ್ಲಿ ಸುನ್ನಿ ಮತ್ತು ಶಿಯಾ ಸಮುದಾಯದ ವಿದ್ವಾಂಸರಿಗೆ ಯಾವುದೇ ಪ್ರಾತಿನಿಧ್ಯ ಇರಲಿಲ್ಲ. ಮಾಜಿ ಸಂಸದರಿಗೂ ಕೂಡ ಸ್ಥಾನವಿರಲಿಲ್ಲ. ಜತೆಗೆ, ಬಾರ್‌ ಕೌನ್ಸಿಲ್‌ ಕೆಟಗಿರಿಯಿಂದ ಕಿರಿಯ ವಕೀಲರನ್ನು ಮಂಡಳಿಗೆ ನೇಮಿಸಿ ಹಿರಿಯ ವಕೀಲರ ಜತೆಗೆ ಹಿತಾಸಕ್ತಿಯ ಸಂಘರ್ಷಕ್ಕೆ ಹಾದಿ ಮಾಡಿಕೊಡಲಾಗಿತ್ತು. ವಕ್ಫ್‌ ಸದಸ್ಯರಾಗಿ ಎಸ್‌.ಕೆ.ಖಾಜಾ ಅವರ ಆಯ್ಕೆ ಕುರಿತೂ ಸಾಕಷ್ಟು ದೂರುಗಳಿದ್ದವು. ಹಲವು ಕೋರ್ಟ್‌ ಕೇಸ್‌ಗಳಿಂದಾಗಿ ವಕ್ಫ್‌ ಅಧ್ಯಕ್ಷರ ಕೂಡ ನೇಮಕವಾಗಿರಲಿಲ್ಲ. ಹೀಗಾಗಿ ಸುಮಾರು ಒಂದೂವರೆ ವರ್ಷದಿಂದ ವಕ್ಫ್‌ ಮಂಡಳಿ ಇದ್ದೂ ಇಲ್ಲದಂತಿದ್ದ ಕಾರಣ ಸರ್ಕಾರ ವಕ್ಫ್‌ ಬೋರ್ಡ್‌ ಆಡಳಿತ ಮಂಡಳಿಯನ್ನೇ ವಿಸರ್ಜನೆ ಮಾಡಿದೆ ಎಂದು ಸರ್ಕಾರ ತಿಳಿಸಿದೆ.

ಆದರೆ, ಸರ್ಕಾರದ ಈ ನಿರ್ಧಾರ ಆಕ್ಷೇಪಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ವಕ್ಫ್‌ ಕಾಯ್ದೆ ತಿದ್ದುಪಡಿಗೆ ಪೂರಕವಾಗಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ವಿಪಕ್ಷಗಳು ಆರೋಪಿಸಿವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ