ದಿಲ್ಲಿ ಸ್ಫೋಟಕ್ಕೆ ಕಾರು ನೀಡಿದ್ದ ಕಾಶ್ಮೀರಿ ಉಗ್ರ ಅಮಿರ್‌ ಅರೆಸ್ಟ್‌

KannadaprabhaNewsNetwork |  
Published : Nov 17, 2025, 12:45 AM ISTUpdated : Nov 17, 2025, 05:20 AM IST
  Amir Rashid

ಸಾರಾಂಶ

ಕೆಂಪುಕೋಟೆ ಸಮೀಪದ ಕಾರ್‌ ಬಾಂಬ್‌ ಸ್ಫೋಟಕ್ಕೆ ಆತ್ಮಾಹುತಿ ದಾಳಿಕೋರ ಡಾ। ಉಮರ್‌ ನಬಿ ಬಳಸಿದ್ದ ‘ಹ್ಯುಂಡೈ ಐ20’ ಕಾರು ಖರೀದಿಗೆ ಸಹಕರಿಸಿದ್ದ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ಇದು ಈ ಪ್ರಕರಣದ ಮೊದಲ ಬಂಧನವಾಗಿದೆ.

 ನವದೆಹಲಿ: ಕೆಂಪುಕೋಟೆ ಸಮೀಪದ ಕಾರ್‌ ಬಾಂಬ್‌ ಸ್ಫೋಟಕ್ಕೆ ಆತ್ಮಾಹುತಿ ದಾಳಿಕೋರ ಡಾ। ಉಮರ್‌ ನಬಿ ಬಳಸಿದ್ದ ‘ಹ್ಯುಂಡೈ ಐ20’ ಕಾರು ಖರೀದಿಗೆ ಸಹಕರಿಸಿದ್ದ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ಇದು ಈ ಪ್ರಕರಣದ ಮೊದಲ ಬಂಧನವಾಗಿದೆ.

ಬಂಧಿತನ ಹೆಸರು ಅಮೀರ್‌ ರಷೀದ್‌

ಬಂಧಿತನ ಹೆಸರು ಅಮೀರ್‌ ರಷೀದ್‌ ಅಲಿ. ಈತ ಜಮ್ಮು ಕಾಶ್ಮೀರದ ಪಾಂಪೋರ್‌ ಬಳಿಯ ಸಂಬೂರ ಗ್ರಾಮದ ನಿವಾಸಿ.

‘ದಾಳಿಗೆ ಬಳಸಲಾದ ಕಾರು ಬಂಧಿತ ಅಲಿ ಹೆಸರಲ್ಲಿ ನೋಂದಣಿಯಾಗಿತ್ತು. ಆತ ಉಗ್ರರೊಂದಿಗೆ ದೆಹಲಿಗೆ ತೆರಳಿ ಕಾರು ಖರೀದಿಯಲ್ಲಿ ಸಹಕರಿಸಿದ್ದ. ದೆಹಲಿ ದಾಳಿಗಾಗಿ ಕಾರಿನಲ್ಲಿ ಸಾಗಿಸಬಹುದಾದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇದೇ ಕಾರಿನಲ್ಲಿ ಇರಿಸಲಾಗಿತ್ತು’ ಎಂದೂ ಹೇಳಿದ್ದಾರೆ.

ದಾಳಿಯಾದ ದಿನವೇ ಈತ, ಹೊಸ ಕಾರು ಖರೀದಿದಾರರಿಗೆ ಶೋರೂಂಗಳು ನೀಡುವ ‘ಬೃಹತ್ ಸಾಂಕೇತಿಕ ಕೀ’ ಹಿಡಿದು ಅದರ ಮುಂದೆ ನಿಂತ ಫೋಟೋ ವೈರಲ್ ಆಗಿತ್ತು.

ಇನ್ನೊಂದು ಕಾರು ವಶ:

ಇದರೊಂದಿಗೆ ಅಧಿಕಾರಿಗಳು, ಆತ್ಮಾಹುತಿ ದಾಳಿಕೋರ ಡಾ। ಉಮರ್‌ ನಬಿಗೆ ಸೇರಿದ ಮತ್ತೊಂದು ಕಾರ್‌ ಅನ್ನು ಜಪ್ತಿ ಮಾಡಿದ್ದಾರೆ. ಅದರ ಪಡೆದು ಪರಿಶೀಲಿಸುತ್ತಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ನಾನು ಸ್ಮಾರ್ಟ್‌ಫೋನ್‌, ಇಂಟರ್ನೆಟ್‌ ಬಳಸಲ್ಲ: ದೋವಲ್‌
ಅಮೆರಿಕ ನಿಗೂಢ ಅಸ್ತ್ರದಿಂದ ವೆನಿಜುವೆಲನ್ನರಿಗೆ ರಕ್ತ ವಾಂತಿ!