ರಾಜಸ್ಥಾನ ಮಾಜಿ ಸಿಎಂ ಗೆಹ್ಲೋಟ್‌ಗೆ ಕೊರೊನಾ, ಹಂದಿಜ್ವರ

KannadaprabhaNewsNetwork |  
Published : Feb 04, 2024, 01:31 AM ISTUpdated : Feb 04, 2024, 09:11 AM IST
ಅಶೋಕ್‌ | Kannada Prabha

ಸಾರಾಂಶ

ಅಶೋಕ್‌ ಗೆಹ್ಲೋಟ್‌ಗೆ ಆಮ್ಲಜನಕ ಯಂತ್ರ ಅಳವಡಿಕೆ ಮಾಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ

ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ಗೆ ಕೊರೊನಾ ಸೋಂಕು ಹಾಗೂ ಹಂದಿಜ್ವರ ದೃಢಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಗೆಹ್ಲೋಟ್‌, ‘ಜ್ವರದ ಹಿನ್ನೆಲೆಯಲ್ಲಿ ನಾನು ಜೈಪುರದ ಸವಾಯ್‌ ಮಾನ್‌ಸಿಂಗ್‌ ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಇಂದು ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿದೆ. 

ಈ ಹಿನ್ನೆಲೆಯಲ್ಲಿ ಮುಂದಿನ ಏಳು ದಿನಗಳ ಕಾಲ ಯಾರನ್ನೂ ಭೇಟಿ ಮಾಡುವುದಿಲ್ಲ’ ಎಂದು ತಿಳಿಸಿದ್ದಾರೆ. ಈ ನಡುವೆ ಗೆಹ್ಲೋಟ್‌ ಅವರಿಗೆ ಆಮ್ಲಜನಕ ಸಿಲಿಂಡರ್‌ ಅಳವಡಿಕೆ ಮಾಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಚಲ್‌ ಶರ್ಮಾ ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೆಡಿ ಚಿತ್ರದ ‘ಸೆರಗು ಸರ್‌ಸೇ’ ಹಾಡು ಬಗ್ಗೆ ಸಂಸತ್‌ನಲ್ಲೂ ಕಿಡಿ
ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ