ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು

KannadaprabhaNewsNetwork |  
Published : Sep 15, 2025, 01:01 AM IST
ಕುವೆಂಪು | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ  ಹಾಗೂ ಅದು ಆಯೋಜಿಸಿದ ಹಿಂದಿ ದಿವಸವನ್ನು ವಿರೋಧಿಸಿ ಬಂಗಾಳಿ ಪರ ಸಂಸ್ಥೆಯಾದ ಬಂಗಾಳ ಪೊಖ್ಖೊ ಪ್ರತಿಭಟನೆಯನ್ನು ಆಯೋಜಿಸಿದ್ದು, ಈ ವೇಳೆ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರವನ್ನು ಪ್ರದರ್ಶಿಸಲಾಯಿತು. 

 ಕೋಲ್ಕತಾ: ಕೇಂದ್ರ ಸರ್ಕಾರದ ಹಿಂದಿ ಹೇರಿಕೆಹಾಗೂ ಅದು ಆಯೋಜಿಸಿದ ಹಿಂದಿ ದಿವಸವನ್ನು ವಿರೋಧಿಸಿ ಬಂಗಾಳಿ ಪರ ಸಂಸ್ಥೆಯಾದ ಬಂಗಾಳ ಪೊಖ್ಖೊ ಪ್ರತಿಭಟನೆಯನ್ನು ಆಯೋಜಿಸಿದ್ದು, ಈ ವೇಳೆ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರವನ್ನು ಪ್ರದರ್ಶಿಸಲಾಯಿತು.

 ಅಲ್ಲದೆ, ಹಿಂದಿ ಭಾಷೆಯ ಬಗ್ಗೆ ಕನ್ನಡದ ಕವಿ ಕುವೆಂಪು ಅವರ ನಿಲುವುಗಳ ಬಗ್ಗೆಯೂ ಭಾಷಣಕಾರರು ಮಾತನಾಡಿದರು. ಸ್ಥಳೀಯ ಭಾಷೆಗಳ ಜಾಗದಲ್ಲಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಈ ಪ್ರತಿಭಟನಾ ರ್‍ಯಾಲಿ ನಡೆದಿದ್ದು, ಬಂಗಾಳಿ ಸೇರಿದಂತೆ ಅನ್ಯ ಹಿಂದಿಯೇತರ ಭಾಷೆಗಳಿರುವ ಫಲಕಗಳು, ಕುವೆಂಪು, ತಮಿಳುನಾಡಿನ ಮಾಜಿ ಸಿಎಂ ಎಂ.ಕರುಣಾನಿಧಿಯಂತಹ ದಿಗ್ಗಜರ ಫೋಟೋಗಳನ್ನು ಪ್ರದರ್ಶಿಸಲಾಯಿತು.

ಈ ವೇಳೆ, ಹಿಂದಿಯಲ್ಲಿ ಲಭ್ಯವಿರುವ ಕೇಂದ್ರ ಸರ್ಕಾರದ ಎಲ್ಲಾ ಪರೀಕ್ಷೆಗಳು ಮತ್ತು ವೆಬ್‌ಸೈಟ್‌ಗಳು ಸಂವಿಧಾನದಲ್ಲಿ ಅಧಿಕೃತವಾಗಿ ಗುರುತಿಸಲಾಗಿರುವ ಎಲ್ಲಾ ಭಾಷೆಗಳಲ್ಲೂ ದೊರೆಯಬೇಕು ಎಂದು ಆಗ್ರಹಿಸಲಾಯಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಕಾರು ಬುಕ್‌ ಮಾಡುವಾಗಲೇ ಟಿಪ್ಸ್‌ ಕೇಳುವುದಕ್ಕೆ ನಿಷೇಧ!
ರೈಲ್ವೆ ಪರಿಷ್ಕೃತ ದರ ಇಂದಿನಿಂದ ಜಾರಿಗೆ