ಬಾಂಗ್ಲಾ: ಹೊತ್ತಿ ಉರಿದ ಹಿಂದೂ ಶಿಕ್ಷಕನ ಮನೆ

KannadaprabhaNewsNetwork |  
Published : Jan 17, 2026, 02:45 AM IST
Bangladesh

ಸಾರಾಂಶ

ಹಿಂದೂಗಳನ್ನು ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ ಸರಣಿ ಘಟನೆಗಳ ಬೆನ್ನಲ್ಲೇ, ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕರೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಢಾಕಾ: ಹಿಂದೂಗಳನ್ನು ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ ಸರಣಿ ಘಟನೆಗಳ ಬೆನ್ನಲ್ಲೇ, ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕರೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ. 

ಸಿಲ್ಹೆಟ್‌ನ ಉಪಜಿಲ್ಲೆಯಾದ ಗೊವೈನ್‌ಘಾಟ್‌ ಎಂಬಲ್ಲಿದ್ದ ಶಿಕ್ಷಕ

ಸಿಲ್ಹೆಟ್‌ನ ಉಪಜಿಲ್ಲೆಯಾದ ಗೊವೈನ್‌ಘಾಟ್‌ ಎಂಬಲ್ಲಿದ್ದ ಶಿಕ್ಷಕ ಬಿರೇಂದ್ರ ಕುಮಾರ್‌ ದೇ ಅವರ ಮನೆಯಲ್ಲಿ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋದಲ್ಲೊ ಬೆಂಕಿ ಮನೆಯನ್ನು ಆವರಿಸಿಕೊಳ್ಳುತ್ತಿರುವುದು ಮತ್ತು ಒಳಗಿದ್ದವರು ಹೊರಬರಲು ಹೆಣಗಾಡುವುದನ್ನು ಕಾಣಬಹುದಾಗಿದೆ. ಘಟನೆ ಬೆನ್ನಲ್ಲೆ ಸ್ಥಳ ಪರಿಶೀಲನೆ ನಡೆಸಿದ ಪೊಲೀಸ್‌ ಅಧಿಕಾರಿಗಳು, ‘ಬೆಂಕಿಗೆ ಕಾರಣ ಶಾರ್ಟ್‌ ಸರ್ಕಿಟ್‌ ಇರಬಹುದು’ ಎಂದಿದ್ದಾರೆ. 

ಹಿಂದೂಗಳನ್ನು ಗುರಿಯಾಗಿಸಿಕೊಂಡು ಕ್ರೌರ್ಯಗಳು

ದೇ ಕೂಡ, ‘ಹಿಂದೂ-ಮುಸಲ್ಮಾನರು ಸಾಮರಸ್ಯದಿಂದಿದ್ದೇವೆ. ಯಾರೊಂದಿಗೂ ದ್ವೇಷವಿಲ್ಲ’ ಎನ್ನುವ ಮೂಲಕ ಉದ್ದೇಶಪೂರ್ವಕ ದಾಳಿ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಆದರೆ, ಹಿಂದೂಗಳನ್ನು ಗುರಿಯಾಗಿಸಿಕೊಂಡು ಕ್ರೌರ್ಯಗಳು ನಡೆಯುತ್ತಿರುವ ಹೊತ್ತಿನಲ್ಲಿ ಈ ಘಟನೆ ಸಂಭವಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.

ಘಟನೆ ಬಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್‌ ಜೈಸ್ವಾಲ್‌, ‘ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರು ಪದೇ ಪದೇ ದಾಳಿಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ಇಂತಹ ಕೋಮು ಘಟನೆಗಳನ್ನು ತ್ವರಿತವಾಗಿ ಮತ್ತು ದೃಢವಾಗಿ ನಿಭಾಯಿಸಬೇಕು’ ಎಂದು ಆಗ್ರಹಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಅಮೆರಿಕ ಕಟ್ಟಡ ಕಟ್ಟುವ ದುಡ್ಡಲ್ಲಿ ಭಾರತ ಚಂದ್ರನ ಅಂಗಳಕ್ಕೆ: ಅಮೆರಿಕನ್‌
ಆಂಧ್ರದಲ್ಲಿ ಹೊಸ ಅಳಿಯನಿಗೆ 290 ಖಾದ್ಯಗಳಿಂದ ಔತಣ!