ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಬೆಂಕಿ: ತುರ್ತು ಲ್ಯಾಂಡಿಂಗ್‌

KannadaprabhaNewsNetwork |  
Published : May 18, 2024, 12:36 AM ISTUpdated : May 18, 2024, 06:29 AM IST
ಏರಿಂಡಿಯಾ  | Kannada Prabha

ಸಾರಾಂಶ

ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರಿಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರಿಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.

ಏರಿಂಡಿಯಾದ ಎಐ807 ವಿಮಾನದಲ್ಲಿ ಈ ಅವಘಢ ಸಂಭವಿಸಿದ್ದು,175 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದ್ದು, ದುರಂತವೊಂದು ತಪ್ಪಿದಂತಾಗಿದೆ. ಶುಕ್ರವಾರ ಸಂಜೆ 6 ಗಂಟೆಗೆ ಟೇಕಾಫ್ ಆಗಿದ್ದ ವಿಮಾನ 6.40ರ ಹೊತ್ತಿಗೆ ದೆಹಲಿಯಲ್ಲಿ ಲ್ಯಾಂಡ್ ಮಾಡಲಾಯಿತು ಎಂದು ಮೂಲಗಳು ಹೇಳಿವೆ.

ಬಳಿಕ ಪ್ರಯಾಣಿಕರಿಗೆ ಬೆಂಗಳೂರಿಗೆ ತೆರಳಲು ಬೇರೆ ವ್ಯವಸ್ಥೆ ಮಾಡಲಾಯಿತು ಎಂದು ಏರ್‌ ಇಂಡಿಯಾ ಹೇಳಿದೆ.

ಪುಣೆ ಏರ್‌ಪೋರ್ಟಲ್ಲಿ ಟ್ರಾಕ್ಟರ್‌ಗೆ ಏರ್‌ ಇಂಡಿಯಾ ವಿಮಾನ ಡಿಕ್ಕಿ

ಪುಣೆ ವಿಮಾನ ನಿಲ್ದಾಣದಿಂದ ದೆಹಲಿ ಕಡೆಗೆ ಹಾರಬೇಕಿದ್ದ ಏರ್‌ಇಂಡಿಯಾ ವಿಮಾನವು ಲಗೇಜ್‌ ತೆಗೆದುಕೊಂಡು ಹೋಗುವ ಟ್ರಾಕ್ಟರ್‌ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ವಿಮಾನದ ಟೇಕಾಫ್‌ಅನ್ನು ಸ್ಥಗಿತಗೊಳಿಸಲಾಗಿದೆ

 ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆದೇಶಿಸಿದ್ದು, ಈ ಘಟನೆಯಿಂದ 200 ಪ್ರಯಾಣಿಕರು 6 ಗಂಟೆಗಳ ಕಾಲ ವಿಮಾನನಿಲ್ದಾಣದಲ್ಲೇ ಕಾಯಬೇಕಾಯಿತು. ಆದ್ದರಿಂದ ಪ್ರಯಾಣಿಕರ ಟಿಕೆಟ್‌ ದರವನ್ನು ಮರು ಪಾವತಿ ಮಾಡಿ, ಅವರಿಗೆ ಪೂರಕವಾಗಿ ಬೇರೆ ವ್ಯವಸ್ಥೆ ಮಾಡಲಾಯಿತು ಎಂದು ಏರ್‌ಇಂಡಿಯಾ ತಿಳಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!