ಟಿಎಂಸಿ ಬದಲು ಬಿಜೆಪಿಗೆ ಮತ ಹಾಕುವುದು ಮೇಲು: ಕಾಂಗ್ರೆಸ್‌ ನಾಯಕ ಅಧೀರ್‌

KannadaprabhaNewsNetwork |  
Published : May 02, 2024, 12:19 AM ISTUpdated : May 02, 2024, 05:34 AM IST
ಅಧೀರ್‌ ರಂಜನ್‌ | Kannada Prabha

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಟಿಎಂಸಿಗೆ ಮತ ಹಾಕುವ ಬದಲು ಬಿಜೆಪಿಗೆ ಮತ ಹಾಕುವುದು ಮೇಲು ಎಂದು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.

ಕೋಲ್ಕತಾ: ಲೋಕಸಭೆ ಚುನಾವಣೆಯಲ್ಲಿ ಟಿಎಂಸಿಗೆ ಮತ ಹಾಕುವ ಬದಲು ಬಿಜೆಪಿಗೆ ಮತ ಹಾಕುವುದು ಮೇಲು ಎಂದು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ. 

ಬೆಹ್ರಾಂಪುರದಲ್ಲಿ ಚುನಾವಣಾ ಭಾಷಣ ಮಾಡಿದ ಅಧೀರ್‌, ‘ಟಿಎಂಸಿಗೆ ಮತ ಹಾಕಿದರೆ ಅದು ಬಿಜೆಪಿಗೆ ಮತ ಹಾಕಿದಂತೆ. ಹಾಗಾಗಿ ಟಿಎಂಸಿ ಬದಲು ಬಿಜೆಪಿಗೆ ಮತ ಹಾಕುವುದು ಮೇಲು. ಹಾಗಾಗಿ ಎಲ್ಲರೂ ಈ ಬಾರಿ ಕಾಂಗ್ರೆಸ್‌ಗೆ ಮತ ಹಾಕಿ’ ಎಂದು ಹೇಳಿದರು.

 ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಟಿಎಂಸಿ,‘ಅಧೀರ್‌ ತಾವು ಬಿಜೆಪಿಯ ಬಿ ಟೀಂ ಎಂದು ಪುನಃ ಸಾಬೀತುಪಡಿಸಿಕೊಂಡಿದ್ದಾರೆ. ಅವರು ಬಂಗಾಳದಲ್ಲಿ ಬಿಜೆಪಿಯ ಧನಿಯಾಗಿದ್ದಾರೆ. ಬಂಗಾಳದ ಸಂಸ್ಕೃತಿಯನ್ನು ಪ್ರೀತಿಸುವವರು ಯಾರೂ ಸಹ ಬಿಜೆಪಿ ಪರ ಮತಯಾಚನೆ ಮಾಡುವುದಿಲ್ಲ’ ಎಂದು ಟೀಕಿಸಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ