ಆರ್‌ಪಿಎನ್‌ ಸೇರಿ 14 ಜನರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್‌

KannadaprabhaNewsNetwork |  
Published : Feb 12, 2024, 01:36 AM ISTUpdated : Feb 12, 2024, 07:36 AM IST
ಆರ್‌ಪಿಎನ್‌ ಸಿಂಗ್‌ | Kannada Prabha

ಸಾರಾಂಶ

ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ನಾಯಕರಿಗೆ ಮಣೆ ಹಾಕಲಾಗಿದ್ದು, ಆರ್‌ಪಿಎನ್‌ ಸಿಂಗ್‌ಗೆ ಉತ್ತರ ಪ್ರದೇಶದಿಂದ ಬಿಜೆಪಿಗೆ ಟಿಕೆಟ್‌ ಲಭಿಸಿದೆ.

ನವದೆಹಲಿ: ಕರ್ನಾಟಕವೂ ಸೇರಿದಂತೆ 7 ರಾಜ್ಯಗಳಲ್ಲಿ ಖಾಲಿಯಾಗಲಿರುವ 14 ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಇತ್ತೀಚೆಗಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಾಜಿ ಕೇಂದ್ರ ಸಚಿವ ಆರ್‌ಪಿಎನ್‌ ಸಿಂಗ್‌ ಅವರಿಗೆ ಉತ್ತರ ಪ್ರದೇಶದಿಂದ ಟಿಕೆಟ್‌ ನೀಡಲಾಗಿದೆ. 

ಕರ್ನಾಟಕದಿಂದ ಹಿರಿಯ ನಾಯಕ ನಾರಾಯಣ ಭಾಂಡಗೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಜೊತೆಗೆ ಉತ್ತರ ಪ್ರದೇಶದಲ್ಲೂ ಪ್ರಮುಖ ನಾಯಕ ಡಾ. ಸುಧಾಂಶು ತ್ರಿವೇದಿಗೆ ಟಿಕೆಟ್‌ ನೀಡಲಾಗಿದ್ದು, ಹರಿಯಾಣದಿಂದ ಮಾಜಿ ಬಿಜೆಪಿ ಅಧ್ಯಕ್ಷ ಸುಭಾಷ್‌ ಬರಾಲಾ, ಉತ್ತರಾಖಂಡ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಉತ್ತರಾಖಂಡದ ಹಾಲಿ ಸಂಸದ ಅನಿಲ್‌ ಬಲೂನಿಗೆ ಟಿಕೆಟ್‌ ಸಿಕ್ಕಿಲ್ಲ. ಇನ್ನು ಪಟ್ಟಿಯಲ್ಲಿ ಬಿಹಾರದ ನಾಯಕ ಸುಶೀಲ್‌ ಮೋದಿ ಹೆಸರೂ ಇಲ್ಲ.

ಇದರ ಜೊತೆಗೆ ಉತ್ತರ ಪ್ರದೇಶದಿಂದ 7, ಉತ್ತರಾಖಂಡದಿಂದ ಬಿಹಾರದಿಂದ 2, ಛತ್ತೀಸ್‌ಗಢ, ಉತ್ತರಾಖಂಡ, ಪಶ್ಚಿಮ ಬಂಗಾಳ, ಹರಿಯಾಣ, ಕರ್ನಾಟಕದಿಂದ ತಲಾ 1 ಅಭ್ಯರ್ಥಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್‌ ಪ್ರಕಟಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಯು, ಅಮೆರಿಕ ಬಳಿಕ ಇನ್ನೂ 11 ದೇಶದ ಜತೆ ಟ್ರೇಡ್‌ ಡೀಲ್‌
ಆ್ಯಂಥ್ರೋಪಿಕ್‌ ಎಐನಿಂದ ವಿಶ್ವ ಟೆಕ್‌ ಲೋಕದಲ್ಲಿ ಬಿರುಗಾಳಿ!