ಇತರೆ ಬಿಜೆಪಿ ರಾಜ್ಯಗಳಲ್ಲೂ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿ ?

KannadaprabhaNewsNetwork |  
Published : Feb 05, 2024, 01:45 AM ISTUpdated : Feb 05, 2024, 01:46 AM IST
ಯುಸಿಸಿ | Kannada Prabha

ಸಾರಾಂಶ

ಉತ್ತರಾಖಂಡದ ರೀತಿಯಲ್ಲೇ ಇತರ ಬಿಜೆಪಿ ಆಡಳಿತಾರೂಢ ರಾಜ್ಯಗಳಲ್ಲೂ ಎಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ.

ನವದೆಹಲಿ: ಉತ್ತರಾಖಂಡ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಿದ ಬಳಿಕ, ಬಿಜೆಪಿ ಆಡಳಿತ ಇರುವ ಇತರೆ ಕೆಲ ರಾಜ್ಯಗಳು ಸಂಹಿತೆ ಜಾರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ. ಉತ್ತರಾಖಂಡದ ರೀತಿಯಲ್ಲೇ ಬಿಜೆಪಿ ಆಡಳಿತದ ರಾಜ್ಯಗಳಾದ ಉತ್ತರ ಪ್ರದೇಶ, ಗುಜರಾತ್‌, ಹರ್ಯಾಣ, ಮಧ್ಯಪ್ರದೇಶ ಹಾಗೂ ಅಸ್ಸಾಂ ರಾಜ್ಯಗಳು ಕೂಡಾ ಕಾಯ್ದೆ ಜಾರಿಗೆ ಆಸಕ್ತಿ ಹೊಂದಿವೆ.

ಇದಕ್ಕಾಗಿ ಸಮಿತಿ ರಚಿಸಿ ನಾಗರಿಕ ಸಂಹಿತೆಯ ಅಧ್ಯಯನಕ್ಕೆ ಈ ರಾಜ್ಯಗಳು ತಯಾರಿ ನಡೆಸಿವೆ.

ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ ನಾಗರಿಕ ಸಂಹತೆಯನ್ನು ಜಾರಿ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಡ ಹೇರಿತ್ತು.

ಕರ್ನಾಟಕದಲ್ಲಿ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಸಂಹಿತೆ ಜಾರಿಗೆ ಆಸಕ್ತಿ ತೋರಿಸಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ