ಪ್ರಣಾಳಿಕೆ ಪಾವಿತ್ರ್ಯತೆ ಹೆಚ್ಚಿಸಿದ್ದೇ ಬಿಜೆಪಿ: ಮೋದಿ

KannadaprabhaNewsNetwork |  
Published : Apr 15, 2024, 01:19 AM ISTUpdated : Apr 15, 2024, 05:46 AM IST
ಮೋದಿ | Kannada Prabha

ಸಾರಾಂಶ

ಕಳೆದ 10 ವರ್ಷಗಳಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಲ್ಲ ಅಂಶಗಳನ್ನು ಜಾರಿಗೆ ತರುವ ಮೂಲಕ ಪ್ರಣಾಳಿಕೆಯ ಪಾವಿತ್ರ್ಯತೆಯನ್ನು ಹೆಚ್ಚಿಸಿದೆ. ಮತ್ತೊಂದು ಸಲ ಜನರು ಅಧಿಕಾರ ನೀಡಿದರೆ ಅಧಿಕಾರಕ್ಕೆ ಬಂದ ಮರುದಿನವೇ ಪ್ರಣಾಳಿಕೆ ಜಾರಿಗೆ ಕ್ರಮ ಜರುಗಿಸಲಿದ್ದೇವೆ.

ನವದೆಹಲಿ: ಕಳೆದ 10 ವರ್ಷಗಳಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಲ್ಲ ಅಂಶಗಳನ್ನು ಜಾರಿಗೆ ತರುವ ಮೂಲಕ ಪ್ರಣಾಳಿಕೆಯ ಪಾವಿತ್ರ್ಯತೆಯನ್ನು ಹೆಚ್ಚಿಸಿದೆ. ಮತ್ತೊಂದು ಸಲ ಜನರು ಅಧಿಕಾರ ನೀಡಿದರೆ ಅಧಿಕಾರಕ್ಕೆ ಬಂದ ಮರುದಿನವೇ ಪ್ರಣಾಳಿಕೆ ಜಾರಿಗೆ ಕ್ರಮ ಜರುಗಿಸಲಿದ್ದೇವೆ. ಜನರು ನನಗೆ ನೀಡುವ 3ನೇ ಜನಾದೇಶ ದೇಶದ ಮುಂದಿನ 1000 ವರ್ಷಗಳ ಭವಿಷ್ಯ ನಿರ್ಮಾಣಕ್ಕೆ ದಾರಿದೀಪವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕಳೆದ 10 ವರ್ಷಗಳಲ್ಲಿ ನಮ್ಮ ಪ್ರಣಾಳಿಕೆಯಲ್ಲಿದ್ದ ಗ್ಯಾರಂಟಿಯ ರೀತಿಯಲ್ಲಿ ಜಾರಿಗೆ ತರಲಾಗಿದೆ. ಈ ಮೂಲಕ ಪ್ರಣಾಳಿಕೆಯ ಪಾವಿತ್ರ್ಯತೆಯನ್ನು ಹೆಚ್ಚಿಸಲಾಗಿದೆ. ಜಾಗತಿಕ ಸಮುದಾಯ ಯುದ್ಧ, ಹಣದುಬ್ಬರ ಮುಂತಾದ ಅನಿಶ್ಚಿತತೆಯಿಂದ ಹೊಯ್ದಾಡುತ್ತಿರುವ ಸಮುಯದಲ್ಲಿ ಸ್ಥಿರ ಸರ್ಕಾರವನ್ನು ಜನತೆ ಆರಿಸುವುದು ಅತ್ಯಂತ ಅಗತ್ಯವಾಗಿರುತ್ತದೆ’ ಎಂದು ಜನತೆಗೆ ಕರೆ ನೀಡಿದರು.

ಇದೇ ವೇಳೆ ಜೂ.4ರಂದು ಫಲಿತಾಂಶ ಪ್ರಕಟವಾದ ಮರುಕ್ಷಣದಿಂದಲೇ ಸಂಕಲ್ಪ ಪತ್ರದಲ್ಲಿನ ಭರವಸೆಗಳ ಈಡೇರಿಕೆಗೆ ಶ್ರಮಿಸುವುದಾಗಿ ತಿಳಿಸಿದ ಪ್ರಧಾನಿ, ಮುಂದಿನ ಚುನಾವಣೆಯ ಒಳಗೆ ಒಂದು ದೇಶ ಒಂದು ಚುನಾವಣೆ ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ರಾಷ್ಟ್ರದ ಹಿತದೃಷ್ಟಿಯಿಂದ ಮೊದಲ ಆದ್ಯತೆಯಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇರಾನ್‌ ಸೋಲೊಪ್ಪದ ಸಾಹಸದ ಹಿಂದೆ ‘ಜಾಫರಿ’ ತಂತ್ರ!
ಇರಾನ್‌ ಶರಣಾಗತಿ ಸನ್ನಿಹಿತ: ಟ್ರಂಪ್‌