ನವದೆಹಲಿ: ಕಳೆದ 10 ವರ್ಷಗಳಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಲ್ಲ ಅಂಶಗಳನ್ನು ಜಾರಿಗೆ ತರುವ ಮೂಲಕ ಪ್ರಣಾಳಿಕೆಯ ಪಾವಿತ್ರ್ಯತೆಯನ್ನು ಹೆಚ್ಚಿಸಿದೆ. ಮತ್ತೊಂದು ಸಲ ಜನರು ಅಧಿಕಾರ ನೀಡಿದರೆ ಅಧಿಕಾರಕ್ಕೆ ಬಂದ ಮರುದಿನವೇ ಪ್ರಣಾಳಿಕೆ ಜಾರಿಗೆ ಕ್ರಮ ಜರುಗಿಸಲಿದ್ದೇವೆ. ಜನರು ನನಗೆ ನೀಡುವ 3ನೇ ಜನಾದೇಶ ದೇಶದ ಮುಂದಿನ 1000 ವರ್ಷಗಳ ಭವಿಷ್ಯ ನಿರ್ಮಾಣಕ್ಕೆ ದಾರಿದೀಪವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇದೇ ವೇಳೆ ಜೂ.4ರಂದು ಫಲಿತಾಂಶ ಪ್ರಕಟವಾದ ಮರುಕ್ಷಣದಿಂದಲೇ ಸಂಕಲ್ಪ ಪತ್ರದಲ್ಲಿನ ಭರವಸೆಗಳ ಈಡೇರಿಕೆಗೆ ಶ್ರಮಿಸುವುದಾಗಿ ತಿಳಿಸಿದ ಪ್ರಧಾನಿ, ಮುಂದಿನ ಚುನಾವಣೆಯ ಒಳಗೆ ಒಂದು ದೇಶ ಒಂದು ಚುನಾವಣೆ ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ರಾಷ್ಟ್ರದ ಹಿತದೃಷ್ಟಿಯಿಂದ ಮೊದಲ ಆದ್ಯತೆಯಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.