ಕೇರಳದಲ್ಲಿ ಗೋಹತ್ಯೆ ನಡೆಸಿದ್ದರಿಂದಲೇ ವಯನಾಡಿನಲ್ಲಿ ಭೂಕುಸಿತ : ಬಿಜೆಪಿ ನಾಯಕ ವಿವಾದ

KannadaprabhaNewsNetwork |  
Published : Aug 04, 2024, 01:23 AM ISTUpdated : Aug 04, 2024, 04:54 AM IST
ಜ್ಞಾನದೇವ್‌ | Kannada Prabha

ಸಾರಾಂಶ

ಕೇರಳದಲ್ಲಿ ಗೋಹತ್ಯೆ ನಡೆಸಿದ್ದರಿಂದಲೇ ವಯನಾಡಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜಸ್ಥಾನದ ಮಾಜಿ ಸಂಸದ ಜ್ಞಾನದೇವ್‌ ಅಹುಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೈಪುರ: ಕೇರಳದಲ್ಲಿ ಗೋಹತ್ಯೆ ನಡೆಸಿದ್ದರಿಂದಲೇ ವಯನಾಡಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜಸ್ಥಾನದ ಮಾಜಿ ಸಂಸದ ಜ್ಞಾನದೇವ್‌ ಅಹುಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾದ್ಯಮದೊಂದಿಗೆ ಮಾತನಾಡಿದ ಅವರು, ‘ಗೋ ಹತ್ಯೆ ನಡೆಸಿದ ಕಾರಣವೇ ಭೂಕುಸಿತ ಸಂಭವಿಸಿದ್ದು, ಇದು ಅಂತ್ಯವಾಗುವ ತನಕ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಉತ್ತರಾಖಂಡ, ಹಿಮಾಚಲ ಪ್ರದೇಶಗಳಲ್ಲಿ ಮೇಘಸ್ಫೋಟ ಹಾಗೂ ಭೂಕುಸಿತ ಸಾಮಾನ್ಯವಾದರೂ ಅವು ಈ ಮಟ್ಟದ ಅವಾಂತರ ಸೃಷ್ಟಿಸುವುದಿಲ್ಲ’ ಎಂದರು.

2018ರಿಂದ ಗೋಹತ್ಯೆ ನಡೆಯುತ್ತಿರುವ ಪ್ರದೇಶಗಳಲ್ಲಿ ಇಂತಹ ದುರ್ಘಟನೆಗಳು ನಡೆಯುತ್ತಿದ್ದು, ಕೇರಳ ಈಗಲೇ ಎಚ್ಚೆತ್ತುಕೊಂಡು ಗೋಹತ್ಯೆ ನಿಲ್ಲಿಸಿದರೆ ಒಳಿತು ಎಂದು ಅವರು ಎಚ್ಚರಿಸಿದರು.

ಕೇರಳದ ವಯನಾಡು, ಮುಂಡಕ್ಕೈ, ಚೂರಲ್‌ಮಲೆ ಹಾಗೂ ಮೆಪ್ಪಾಡಿಗಳಲ್ಲಿ ಜು.30ರಂದ ಭೂಕುಸಿತಗಳು ಸಂಭವಿಸುತ್ತಿದ್ದು, ಇದುವರೆಗೆ 350ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಡ್ರಗ್ಸ್‌ ನೀಡಿ 50 ಮಹಿಳೆಯರ ರೇಪ್‌ ಮಾಡಿದ್ದ ಜ್ಯೋತಿಷಿ ಸೆರೆ!
ಸಮರ ಬಿಸಿ: ಪ್ರೀಮಿಯಂ ಪೆಟ್ರೋಲ್‌ ₹2.35 ಏರಿಕೆ