ಗೋಮೂತ್ರ ಸ್ವಾಗತ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ 8 ಮಂದಿಗೆ ‘ಶುದ್ಧಿ’ ಮಾಡಿದ ಶಾಸಕ!

KannadaprabhaNewsNetwork |  
Published : Sep 28, 2024, 01:15 AM ISTUpdated : Sep 28, 2024, 05:29 AM IST
ಶುದ್ಧಿ | Kannada Prabha

ಸಾರಾಂಶ

ಜೈಪುರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ 8 ನಗರಪಾಲಿಕೆ ಸದಸ್ಯರನ್ನು ಗೋಮೂತ್ರ ಸಿಂಪಡಿಸಿ ಪಕ್ಷಕ್ಕೆ ಸ್ವಾಗತಿಸಲಾಗಿದೆ. ಈ ವೇಳೆ ಪಾಲಿಕೆಯನ್ನು 'ಭ್ರಷ್ಟಾಚಾರದಿಂದ ಅಶುದ್ಧಗೊಂಡಿದೆ' ಎಂದು ಆರೋಪಿಸಿ ಗೋಮೂತ್ರದಿಂದ ಶುದ್ಧೀಕರಿಸಲಾಗಿದೆ.

ಜೈಪುರ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ 8 ಜೈಪುರ ನಗರಪಾಲಿಕೆ ಸದಸ್ಯರನ್ನು ರಾಜಸ್ಥಾನ ಬಿಜೆಪಿ ಶಾಸಕ ಬಾಲಮುಕುಂದ ಆಚಾರ್ಯ ಗಂಗಾಜಲ ಮತ್ತು ಗೋಮೂತ್ರ ಸಿಂಪಡಿಸಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಜೊತೆಗೆ ಭ್ರಷ್ಟಾಚಾರದಿಂದ ‘ಅಶುದ್ಧಗೊಂಡಿದೆ’ ಎಂದು ಆರೋಪ ಹೊರಿಸಿ ಜೈಪುರ ಮಹಾನಗರ ಪಾಲಿಕೆಯನ್ನೂ ಗೋಮೂತ್ರದಿಂದ ಶುದ್ಧೀಕರಿಸಲಾಗಿದೆ.

ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಮಾಜಿ ಮೇಯರ್‌ ಮುನೇಶ್‌ ಗುರ್ಜಾರ್‌ ಅವರ ಜಾಗಕ್ಕೆ ಬಿಜೆಪಿ ಕುಸುಮ್‌ ಯಾದವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಈ ವೇಳೆ ಅವರಿಗೆ 7 ಕಾಂಗ್ರೆಸ್‌ ಮತ್ತು ಒಬ್ಬ ಸ್ವತಂತ್ರ ಸದಸ್ಯರ ಬೆಂಬಲ ದೊರೆತು, ಅವರೆಲ್ಲ ಬಿಜೆಪಿಗೆ ಸೇರ್ಪಡೆಯಾದರು.

ಬಳಿಕ ಯಾದವ್‌ರ ಪದಗ್ರಹಣದ ಮುನ್ನ ಪಾಲಿಕೆಯ ಕಚೇರಿಯನ್ನು ಮಂತ್ರಘೋಷದೊಂದಿಗೆ ಗಂಗಾಜಲದಿಂದ ಶುದ್ಧೀಕರಿಸಲಾಯಿತು. ಅಂತೆಯೇ ಬಿಜೆಪಿ ಸೇರಿದ 8 ಸದಸ್ಯರ ಮೇಲೆ ಗೋಮುತ್ರ ಸಿಂಪಡಿಸಿಲಾಯಿತು.

‘ಅವರನ್ನು ಅಪವಿತ್ರತೆ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ ಸನಾತನಿಗಳಾಗಿ ಪರಿವರ್ತಿಸಲಾಗಿದೆ. ಇನ್ನು ಅವರೆಲ್ಲ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ’ ಎಂದು ಶಾಸಕ ಆಚಾರ್ಯ ಹೇಳಿದ್ದಾರೆ.

ಇದನ್ನು ಟೀಕಿಸಿರುವ ಕಾಂಗ್ರೆಸ್‌, ‘ಭ್ರಷ್ಟರು ಬಿಜೆಪಿ ಸೇರುತ್ತಿದ್ದಂತೆ ಸಾಚಾಗಳಾಗುತ್ತಾರೆ’ ಎಂದಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ