ಬಡ ಸೈನಿಕರು, ಶ್ರೀಮಂತ ಸೈನಿಕರ ವರ್ಗ ಸೃಷ್ಟಿ ಎಂದ ರಾಹುಲ್‌ ವಿರುದ್ಧ ದೂರು

KannadaprabhaNewsNetwork |  
Published : May 16, 2024, 12:53 AM ISTUpdated : May 16, 2024, 06:31 AM IST
ರಾಹುಲ್‌ | Kannada Prabha

ಸಾರಾಂಶ

ನರೇಂದ್ರ ಮೋದಿ ಸರ್ಕಾರ ಎರಡು ರೀತಿಯ ಸೇನೆಯನ್ನು ಸೃಷ್ಟಿಸಿದೆ. ಒಂದು ಬಡಕುಟುಂಬ ಮತ್ತು ಮೀಸಲಾತಿಯಿಂದ ಬಂದವರು.

ನವದೆಹಲಿ: ‘ನರೇಂದ್ರ ಮೋದಿ ಸರ್ಕಾರ ಎರಡು ರೀತಿಯ ಸೇನೆಯನ್ನು ಸೃಷ್ಟಿಸಿದೆ. ಒಂದು ಬಡ ಕುಟುಂಬ ಮತ್ತು ಮೀಸಲಾತಿಯಿಂದ ಬಂದವರು. ಇನ್ನೊಂದು ವರ್ಗ ಶ್ರೀಮಂತ ಹಿನ್ನಲೆಯಿಂದ ಬಂದವರು’ ಎಂದು ಸೇನೆ ಕುರಿತಾಗಿ ಕೆಲ ದಿನಗಳ ಹಿಂದೆ ರಾಹುಲ್ ಗಾಂಧಿ ನೀಡಿದ ಹೇಳಿಕೆ ಖಂಡಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ ಮಾಡಿದೆ.

ಇತ್ತೀಚಿಗೆ ರಾಯಬರೇಲಿಯಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಹುಲ್‌ ಗಾಂಧಿ, ಅಗ್ನಿಪಥ್‌ ಯೋಜನೆಯಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಈ ರೀತಿ ಹೇಳಿಕೆಯನ್ನು ನೀಡಿದ್ದರು. 

ಇದನ್ನು ವಿರೋಧಿಸಿ ಕೇಂದ್ರ ಸಚಿವರಾದ ಎಸ್‌.ಜೈ.ಶಂಕರ್, ಅರ್ಜುನ್ ಮೇಘವಾಲ್, ರಾಜೀವ್ ಚಂದ್ರಶೇಖರ್ ಚುನಾವಣಾ ಆಯೋಗಕ್ಕೆ ರಾಹುಲ್ ವಿರುದ್ಧ ದೂರು ಸಲ್ಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದೇ ಸಂದರ್ಭದಲ್ಲಿ ‘ರಾಹುಲ್ ಗಾಂಧಿ ಸುಳ್ಳು ಹೇಳಿದ್ದಾರೆ. ನಮ್ಮ ಸೇನೆಯ ಮೇಲೆ ಅವರು ದಾಳಿ ಮಾಡುತ್ತಿದ್ದಾರೆ. ಈ ರೀತಿ ವಿವಾದಗಳನ್ನು ಸೃಷ್ಟಿಸಲು ಮತ್ತು ನಮ್ಮ ಸೈನಿಕರ ನೈತಿಕ ಸ್ಥೈರ್ಯ ಕುಗ್ಗಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್‌.ಜೈ.ಶಂಕರ್ ಕಿಡಿಕಾರಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ
ಆನೆಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ರೈಲು, 7 ಗಜ ಬಲಿ