ನವದೆಹಲಿ: ಚುನಾವಣಾ ಪ್ರಚಾರದ ವೇಳೆ ಕೀಳು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್ ನಾಯಕಿ ಸುಪ್ರೀಯಾ ಶ್ರೀನೇತ್ಗೆ ಚುನಾವಣಾ ಆಯೋಗ ಛೀಮಾರಿ ಹಾಕಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಇಂಥ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಇಬ್ಬರ ಹೇಳಿಕೆಗಳ ಮೇಲೂ ನಿಗಾ ಇಡುವುದಾಗಿ ಎಚ್ಚರಿಸಿದೆ. ಅಲ್ಲದೆ ಹೇಳಿಕೆ ಸಂಬಂಧ ಎರಡೂ ಪಕ್ಷಗಳ ಅಧ್ಯಕ್ಷರಿಗೆ ನೋಟಿಸ್ ನೀಡಲಾಗಿದ್ದು ತಮ್ಮ ಅಭ್ಯರ್ಥಿಗಳು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಜಾಗರೂಕತೆಯಿಂದ ಇರಲು ಸೂಚಿಸಿದೆ.