ಇಂದಿನಿಂದ ಸಂಸತ್ತಿನ ನರೇಂದ್ರ ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್‌ ಅಧಿವೇಶನ

KannadaprabhaNewsNetwork |  
Published : Jan 31, 2025, 12:45 AM ISTUpdated : Jan 31, 2025, 05:19 AM IST
ಸಭೆ | Kannada Prabha

ಸಾರಾಂಶ

ನರೇಂದ್ರ ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್‌ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ನರೇಂದ್ರ ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್‌ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ.1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ ಮಂಡನೆ ಮಾಡಲಿದ್ದಾರೆ.

ಬಜೆಟ್‌ ಅಧಿವೇಶನದ ಮೊದಲ ದಿನವಾದ ಶುಕ್ರವಾರ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣದ ಬಳಿಕ ಆರ್ಥಿಕ ಸಮೀಕ್ಷಾ ವರದಿ ಮಂಡನೆಯಾಗಲಿದೆ. ಜ.31ರಿಂದ ಏಪ್ರಿಲ್‌ 4 ರವರೆಗೆ ಎರಡು ಹಂತಗಳಲ್ಲಿ ಬಜೆಟ್‌ ಅಧಿವೇಶನ ನಡೆಯಲಿದ್ದು, ಮೊದಲ ಹಂತದ ಬಜೆಟ್‌ ಫೆ.13ಕ್ಕೆ ಮುಕ್ತಾಯವಾಗಲಿದೆ. ಎರಡನೇ ಹಂತದ ಬಜೆಟ್‌ ಅಧಿವೇಶನ ಮಾರ್ಚ್‌ 10ರಿಂದ ಆರಂಭವಾಗಿ ಏಪ್ರಿಲ್‌ 4ಕ್ಕೆ ಮುಕ್ತಾಯವಾಗಲಿದೆ.ಕೇಂದ್ರ ಸರ್ಕಾರವು ಬಜೆಟ್‌ ಅಧಿವೇಶನದಲ್ಲಿ ವಕ್ಫ್‌ ತಿದ್ದುಪಡಿ ಸೇರಿದಂತೆ ಇತರ ಮೂರು ಹೊಸ ಕಾನೂನುಗಳನ್ನು ತರಲು ಮುಂದಾಗಿದೆ. ವಿಮಾನ ವಸ್ತುಗಳ ಮೇಲಿನ ಹಿತಾಸಕ್ತಿಗಳ ರಕ್ಷಣೆ ಮಸೂದೆ, ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ, ವಲಸೆ ಮತ್ತು ವಿದೇಶಿಯ ಮಸೂದೆ ಜಾರಿಗೆ ಮುಂದಾಗಿದೆ. ಜೊತೆಗೆ ಹಿಂದಿನ ಅಧಿವೇಶನದಿಂದ ಉಭಯ ಸದನಗಳಲ್ಲಿ ಇನ್ನು 10 ಮಸೂದೆಗಳು ಬಾಕಿ ಉಳಿದಿದ್ದು ಅವುಗಳನ್ನೂ ಅಂಗೀಕರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಸರ್ಕಾರ ಮನವಿ

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಸರ್ವಪಕ್ಷಗಳ ಸಭೆ ನಡೆಯಿತು. ಸಚಿವ ರಾಜ್‌ನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 36 ಪಕ್ಷಗಳ 52 ನಾಯಕರು ಭಾಗಿಯಾಗಿದ್ದರು.ಬಜೆಟ್‌ ಅಧಿವೇಶನವು ಫಲಪ್ರದವಾಗಿರುವಂತೆ ನೋಡಿಕೊಳ್ಳುವಂತೆ ಸಂಸದೀಯ ಖಾತೆ ಸಚಿವ ಕಿರಣ್‌ ರಿಜಿಜು ಎಲ್ಲಾ ಪಕ್ಷಗಳ ನಾಯಕರಿಗೂ ಮನವಿ ಮಾಡಿದರು. ಈ ವೇಳೆ ಕುಂಭಮೇಳ ಕಾಲ್ತುಳಿತ, ಹಣದುಬ್ಬರ, ಮೊದಲಾದ ವಿಷಯಗಳ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ, ಕಲಾಪದ ಕಾರ್ಯಸೂಚಿಯನ್ನು ಕಲಾಪ ಸಮಿತಿ ನಿರ್ಧರಿಸಲಿದೆ ಎಂದು ಸ್ಪಷ್ಟಪಡಿಸಿತು.

ವಕ್ಫ್ ತಿದ್ದುಪಡಿ ಮಸೂದೆ ಸ್ಪೀಕರ್ ಓಂ ಬಿರ್ಲಾಗೆ ಹಸ್ತಾಂತರ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ಅಗತ್ಯ ತಿದ್ದುಪಡಿಗಳನ್ನು ತಂದಿದ್ದ ಸಂಸತ್ತಿನ ಜಂಟಿ ಸಂಸದೀಯ ಸಮಿತಿಯು ತನ್ನ ವರದಿಯನ್ನು ಗುರುವಾರ ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಹಸ್ತಾಂತರಿಸಿದೆ. ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಓಂ ಬಿರ್ಲಾ ಅವರನ್ನು ಸಂಸತ್ ಭವನದ ಸ್ಪೀಕರ್ ಕಚೇರಿಯಲ್ಲಿ ಭೇಟಿಯಾಗಿ, ಪ್ರಸ್ತಾವಿತ ಕಾನೂನಿನ ತಿದ್ದುಪಡಿ ಮಸೂದೆಯ ಕರಡನ್ನು ಹಸ್ತಾಂತರಿಸಿದರು. ಸರ್ಕಾರ, ಪ್ರಸಕ್ತ ಬಜೆಟ್‌ ಅಧಿವೇಶನದಲ್ಲೇ ಮಸೂದೆ ಮಂಡನೆಯ ಉದ್ದೇಶ ಹೊಂದಿದೆ.ಆಡಳಿತಾರೂಢ ಬಿಜೆಪಿ ಸದಸ್ಯರು ಸೂಚಿಸಿದ ಬದಲಾವಣೆಗಳನ್ನು ಒಳಗೊಂಡಿರುವ ವರದಿಯನ್ನು ಜೆಪಿಸಿಯು ಬುಧವಾರ ಬಹುಮತದಿಂದ (15-11) ಅಂಗೀಕರಿಸಿತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ಇದು ವಕ್ಫ್ ಬೋರ್ಡ್ ಅನ್ನು ನಾಶಗೊಳಿಸುವ ಸಂಚು ಎಂದು ಟೀಕಿಸಿವೆ.

ಬಿಜೆಪಿ ಮಸೂದೆಯನ್ನು ಬೆಂಬಲಿಸಿದ್ದು, ಇದು ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಆಧುನಿಕತೆ, ಪಾರದರ್ಶಕತೆ ಮತ್ತು ಬದ್ಧತೆಯನ್ನು ತರುತ್ತದೆ ಎಂದಿದ್ದರೆ, ಇದು ಮುಸ್ಲಿಮರ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿ ಎಂದು ಪ್ರತಿಪಕ್ಷಗಳು ಟೀಕಿಸಿವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸ್ಟಾರ್‌ವಾರ್‌ ರೀತಿ ಲೇಸರ್‌ ಅಸ್ತ್ರ ರಾಜ್ಯದಲ್ಲಿ ಅಭಿವೃದ್ಧಿ!
ಗೌರಿ ಲಂಕೇಶ್‌ ಹತ್ಯೆ ಆರೋಪಿ ಮಹಾರಾಷ್ಟ್ರ ಪಾಲಿಕೆ ಚುನಾವಣೆಗೆ