ತನಿಖೆಗೆ ಬಂದ ಇ.ಡಿ ಅಧಿಕಾರಿಗೆ ಮನೆ ತೋರಿಸಿ ಉದ್ಯಮಿ ಪರಾರಿ

KannadaprabhaNewsNetwork |  
Published : Nov 24, 2025, 03:45 AM IST
ED

ಸಾರಾಂಶ

ಜಾರ್ಖಂಡ್‌ ಮತ್ತು ಪಶ್ಚಿಮ ಬಂಗಾಳದಲ್ಲಿ ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿದ್ದವರ ಬೇಟೆಗೆ ಹೊರಟಿದ್ದ ಜಾರಿ ನಿರ್ದೇಶನಾಲದ ಅಧಿಕಾರಿಗಳ ಕಣ್ಣೆದುರೇ ಬಂದ ಆರೋಪಿಯೊಬ್ಬ, ಸಲೀಸಾಗಿ ತಪ್ಪಿಸಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

ರಾಂಚಿ: ಜಾರ್ಖಂಡ್‌ ಮತ್ತು ಪಶ್ಚಿಮ ಬಂಗಾಳದಲ್ಲಿ ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿದ್ದವರ ಬೇಟೆಗೆ ಹೊರಟಿದ್ದ ಜಾರಿ ನಿರ್ದೇಶನಾಲದ ಅಧಿಕಾರಿಗಳ ಕಣ್ಣೆದುರೇ ಬಂದ ಆರೋಪಿಯೊಬ್ಬ, ಸಲೀಸಾಗಿ ತಪ್ಪಿಸಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಇದ್ದಿಲು ವ್ಯಾಪಾರಿಯಾಗಿದ್ದ ಅಮರ್‌ ಮೊಂಡಾಲ್‌ ಮನೆ ಮೇಲೆ ದಾಳಿ

ಕಾರ್ಯಾಚರಣೆಯ ಭಾಗವಾಗಿ ಅಧಿಕಾರಿಗಳು ಇದ್ದಿಲು ವ್ಯಾಪಾರಿಯಾಗಿದ್ದ ಅಮರ್‌ ಮೊಂಡಾಲ್‌ ಮನೆ ಮೇಲೆ ದಾಳಿ ನಡೆಸಲು ಹೊರಟಿದ್ದರು. ಈ ವೇಳೆ ವಾಯುವಿಹಾರಕ್ಕೆ ಹೊರಟಿದ್ದವನೊಬ್ಬನ ಬಳಿ ಮೊಂಡಾಲ್‌ ಬಗ್ಗೆ ವಿಚಾರಿಸಿದ್ದು, ಆತ ಮನೆ ತೋರಿಸಿದ್ದಾನೆ. ಬಳಿಕ ತನ್ನ ಬೈಕ್‌ ಹತ್ತಿಕೊಂಡು ಹೋಗಿದ್ದಾನೆ.

ತಮಗೆ ಮನೆ ತೋರಿಸಿದ್ದಾತನೇ ಮೊಂಡಾಲ್‌

ಇದಾದ ಸ್ವಲ್ಪ ಹೊತ್ತಿನ ಬಳಿಕ ಇ.ಡಿ. ಅಧಿಕಾರಿಗಳಿಗೆ, ತಮಗೆ ಮನೆ ತೋರಿಸಿದ್ದಾತನೇ ಮೊಂಡಾಲ್‌ ಎಂದು ಅರಿವಾಗಿದೆ. ಆದರೆ ಅಷ್ಟರಲ್ಲಾಗಲೇ ಕಾಲ ಮಿಂಚಿತ್ತು. ಬಳಿಕ ಮೊಂಡಾಲ್‌ ಪತ್ತೆಯಾದ ಬಗ್ಗೆ ಮಾಹಿತಿಯಿಲ್ಲ.

ಅಕ್ರಮ ಇದ್ದಿಲು ಗಣಿಗಾರಿಕೆ, ಕಳುವು, ಸಂಗ್ರಹ, ಸಾಗಾಟ, ಮಾರಟದಲ್ಲಿ ತೊಡಗಿರುವವರನ್ನು ಗುರಿಯಾಗಿಸಿಕೊಂಡು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ. ಅಧಿಕಾರಿಗಳು 44 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ಭಾರೀ ಮಳೆ ಎಚ್ಚರಿಕೆ
ಜಿ ರಾಮ್‌ ಜಿ ವಿರುದ್ಧ ಕೈ ಹೋರಾಟ ಶುರು