ಕೇಂದ್ರ ಸರ್ಕಾರ, ರೈತರಿಗೆ ಬಂಪರ್‌ ಗಿಫ್ಟ್‌ : 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ

KannadaprabhaNewsNetwork |  
Published : Oct 17, 2024, 12:55 AM ISTUpdated : Oct 17, 2024, 08:31 AM IST
ಬೆಳೆ | Kannada Prabha

ಸಾರಾಂಶ

 ಕೇಂದ್ರ ಸರ್ಕಾರ, ರೈತರಿಗೆ ಬಂಪರ್‌ ಗಿಫ್ಟ್‌ ನೀಡಿದ್ದು, ಗೋಧಿ ಸೇರಿದಂತೆ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲವನ್ನು ಹೆಚ್ಚು ಮಾಡಲು ನಿರ್ಧರಿಸಿದೆ.

ನವದೆಹಲಿ: ಕೇಂದ್ರ ಸರ್ಕಾರ, ರೈತರಿಗೆ ಬಂಪರ್‌ ಗಿಫ್ಟ್‌ ನೀಡಿದ್ದು, ಗೋಧಿ ಸೇರಿದಂತೆ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲವನ್ನು ಹೆಚ್ಚು ಮಾಡಲು ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಹಂಗಾಮಿಗೆ ಮಾಡಲಾದ ಈ ಏರಿಕೆ ನಂತರ ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು 150 ರು. ಹೆಚ್ಚಿಸಿದೆ. 

ಈ ಮೂಲಕ ಗೋಧಿ ಕ್ವಿಂಟಾಲ್‌ಗೆ 2275 ರೂ.ನಿಂದ 2425 ರೂ.ಗೆ ಏರಿಕೆಯಾಗಿದೆ. ಇದರ ಜೊತೆಗೆ ಸಾಸಿವೆಗೆ 300ರು.ನಷ್ಟು ಕನಿಷ್ಟ ಬೆಂಬಲ ಹೆಚ್ಚಿಸಲಾಗಿದ್ದು, ಕ್ವಿಂಟಾಲ್‌ಗೆ 5950ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಕುಸುಬೆ ದರವನ್ನು ಕ್ವಿಂಟಾಲ್‌ಗೆ 140 ರು. ಮಸೂರ್‌ ದಾಲ್‌ ಕ್ವಿಂಟಾಲ್‌ಗೆ 275, ಬಾರ್ಲಿ ದರ ಕ್ವಿಂಟಾಲ್‌ಗೆ 130 ರು., ಕಡಲೆ ದರ ಕ್ವಿಂಟಾಲ್‌ಗೆ 210 ರು.ನಷ್ಟು ಕನಿಷ್ಟ ಬೆಂಬಲ ಬೆಲೆ ಏರಿಕೆಯಾಗಿದೆ.

ಮಹಾರಾಷ್ಟ್ರ, ಜಾಖಂಡ್‌ ವಿಧಾನಸಭಾ ಚುನಾವಣೆಗಳು ಮತ್ತು ವಿವಿಧ ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರೈತರಿಗೆ ಕೇಂದ್ರ ಈ ಸಿಹಿ ಸುದ್ದಿ ನೀಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾರು ಬುಕ್‌ ಮಾಡುವಾಗಲೇ ಟಿಪ್ಸ್‌ ಕೇಳುವುದಕ್ಕೆ ನಿಷೇಧ!
ರೈಲ್ವೆ ಪರಿಷ್ಕೃತ ದರ ಇಂದಿನಿಂದ ಜಾರಿಗೆ