ಪೇಟಿಎಂನಿಂದ ಬೇರೆಡೆಗೆ ವಹಿವಾಟು ಬದಲಿಸಿಕೊಳ್ಳಿ: ವರ್ತಕರ ಸಂಘದ ಸಲಹೆ

KannadaprabhaNewsNetwork |  
Published : Feb 05, 2024, 01:48 AM IST
ಪೇಟಿಎಂ | Kannada Prabha

ಸಾರಾಂಶ

ಭಾರತ್‌ ಜೋಡೋ ಯಾತ್ರೆಗೆ ನಮ್ಮನ್ನು ಕರೆದಿಲ್ಲ ಎಂದು ಅಖಿಲೇಶ್‌ ಆರೋಪಿಸಿದ್ದಾರೆ. ಅಲ್ಲದೆ ಅಸ್ಸಾಂನಲ್ಲಿ ಟಿಎಂಸಿ ಜತೆ ಮೈತ್ರಿ ಇಲ್ಲ ಎಂದು ರಾಜ್ಯ ಕಾಂಗ್ರೆಸ್‌ ಘೋಷಿಸಿದೆ.

ನವದೆಹಲಿ: ಭಾರತೀಯ ರಿಸರ್ವ ಬ್ಯಾಂಕ್‌ ಇದೇ ತಿಂಗಳಾಂತ್ಯದಿಂದ ಪೇಟಿಎಂ ಬ್ಯಾಂಕ್‌ನ ಮೇಲೆ ವಿವಿಧ ರೀತಿಯ ನಿರ್ಬಂಧ ವಹಿಸಿರುವ ಹಿನ್ನೆಲೆಯಲ್ಲಿ ಎಲ್ಲ ವರ್ತಕರು ಇತರ ಹಣಕಾಸು ಸಂಸ್ಥೆಗಳಿಗೆ ತಮ್ಮ ವಹಿವಾಟುಗಳನ್ನು ವರ್ಗಾಯಿಸಿಕೊಳ್ಳುವಂತೆ ಅಖಿಲ ಭಾರತ ವರ್ತಕರ ಒಕ್ಕೂಟವಾದ ಸಿಎಐಟಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಪ್ರವೀಣ್‌ ಖಂಡೇಲ್‌ವಾಲ್‌, ‘ಪೇಟಿಎಂ ಸಂಸ್ಥೆಗೆ ನಿರ್ಬಂಧ ವಿಧಿಸಿರುವುದರಿಂದ ಅದರ ವಿಶ್ವಾಸಾರ್ಹತೆ ಮತ್ತು ಸುರಕ್ಷತೆಯ ಕುರಿತು ಪ್ರಶ್ನೆಗಳು ಎದ್ದಿವೆ.

ಈ ಹಿನ್ನೆಲೆ ವರ್ತಕರು ಹಣದ ಸುರಕ್ಷತೆ ಮತ್ತು ಅನಿಯಮಿತವಾಗಿ ಹಣದ ವಹಿವಾಟು ಕೈಗೊಳ್ಳುವ ದೃಷ್ಟಿಯಿಂದ ಇತರ ನಂಬಿಕಸ್ಥ ಸಂಸ್ಥೆಗಳಿಗೆ ತಮ್ಮ ವ್ಯವಹಾರಗಳನ್ನು ವರ್ಗಾಯಿಸಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಕೆವೈಸಿ ನಿಯಮಗಳ ಪಾಲಿಸದ ಹಿನ್ನೆಲೆಯಲ್ಲಿ ಪೇಟಿಎಂ ಬ್ಯಾಂಕ್‌ನ ಮೇಲೆ ಆರ್‌ಬಿಐ ನಿರ್ಬಂಧ ಹೇರಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಯುದ್ಧ 100 ದಿನ ಮುಂದುವರಿಯುವ ಸಾಧ್ಯತೆ!
ಕನ್ನಡತಿ ಕೃತಿ ಕಾರಂತ್‌ಗೆ ಜಾಗತಿಕ ಪ್ರಶಸ್ತಿ