ಇಯರ್‌ಫೋನ್‌ ಅತಿ ಬಳಕೆ ವಿರುದ್ಧ ಕೇಂದ್ರ ಎಚ್ಚರಿಕೆ - ಅತಿ ಬಳಕೆಯಿಂದ ಶ್ರವಣದೋಷ : ಆರೋಗ್ಯ ಇಲಾಖೆ

Published : Feb 28, 2025, 06:58 AM IST
Mi Earphones Basic

ಸಾರಾಂಶ

ಇಯರ್‌ಫೋನ್‌ ಮತ್ತು ಹೆಡ್‌ಫೋನ್‌ಗಳ ಅತಿಯಾದ ಬಳಕೆಯಿಂದ ಜನರಲ್ಲಿ ಶ್ರವಣದೋಷ ಉಂಟಾಗುತ್ತಿದೆ ಎಂದಿರುವ ಕೇಂದ್ರ ಆರೋಗ್ಯ ಸಚಿವಾಲಯ. ಇದರ ದೀರ್ಘಕಾಲದ ಬಳಕೆ ವಿರುದ್ಧ ಜಾಗೃತಿ ಮೂಡಿಸುವಂತೆ ರಾಜ್ಯಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಸೂಚಿಸಿದೆ.

 ನವದೆಹಲಿ: ಇಯರ್‌ಫೋನ್‌ ಮತ್ತು ಹೆಡ್‌ಫೋನ್‌ಗಳ ಅತಿಯಾದ ಬಳಕೆಯಿಂದ ಜನರಲ್ಲಿ ಶ್ರವಣದೋಷ ಉಂಟಾಗುತ್ತಿದೆ ಎಂದಿರುವ ಕೇಂದ್ರ ಆರೋಗ್ಯ ಸಚಿವಾಲಯ. ಇದರ ದೀರ್ಘಕಾಲದ ಬಳಕೆ ವಿರುದ್ಧ ಜಾಗೃತಿ ಮೂಡಿಸುವಂತೆ ರಾಜ್ಯಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಸೂಚಿಸಿದೆ.

ಈ ಕುರಿತು ವಿವರಿಸಿದ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಪ್ರೊ. ಅತುಲ್ ಗೋಯೆಲ್, ‘ಆಡಿಯೋ ಸಾಧನಗಳ ಅತಿಯಾದ ಬಳಕೆಯಿಂದ ಜನರಲ್ಲಿ ಸರಿಪಡಿಸಲಾಗದಂತಹ ಶ್ರವಣದೋಷ ಉಂಟಾಗುತ್ತಿದೆ. ಯುವಕರಲ್ಲಿ ಇದು ಅತಿಯಾಗಿದೆ. 50 ಡೆಸಿಬಲ್‌ಗಳಿಗೆ ಹಾಗೂ ದಿನಕ್ಕೆ 2 ಗಂಟೆ ಮೀರದಂತೆ ಈ ಸಾಧನಗಳನ್ನು ಬಳಸಬೇಕು. ಆಗಾಗ ವಿರಾಮ ತೆಗೆದುಕೊಳ್ಳಬೇಕು’ ಎಂದಿದ್ದಾರೆ.

ಅಲ್ಲದೆ, ಮಕ್ಕಳು ನಿರಂತರವಾಗಿ ಮೊಬೈಲ್/ಟೀವಿ ನೋಡುವುದರಿಂದ ಮೆದುಳಿನ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಎಚ್ಚರಿಸಿರುವ ಅವರು, ಶ್ರವಣ ದೋಷ ಪತ್ತೆ ಹಚ್ಚಲು ನಿರಂತರ ತಪಾಸಣಾ ಶಿಬಿರಗಳನ್ನು ಆಯೋಜಿಸಿ, ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಜ್ಯಗಳು, ವೈದ್ಯಕೀಯ ಕಾಲೇಜುಗಳಿಗೆ ಸೂಚಿಸಿದ್ದಾರೆ.

PREV

Recommended Stories

ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಉದಯಗಿರಿ, ಹಿಮಗಿರಿ ಸ್ಟೆಲ್ತ್‌ ನೌಕೆ ನೌಕಾಪಡೆ ಬತ್ತಳಿಕೆಗೆ