ವಿಶೇಷ ಅಭಿಯೋಜಕರಾಗಿ ಉಜ್ವಲ್ ನಿಕಂ?
ಹುಟ್ಟುಹಬ್ಬದ ನೆಪದಲ್ಲಿ ಜೂ.18ರಂದು ಕೇತನ್ರನ್ನು ಪುಣೆಯ ಲೋಹಗಡ ಕೋಟೆಗೆ ಕರೆಸಿದ್ದ ಸಿಯಾ, ಅಲ್ಲಿ ಬೆಟ್ಟಂದ ಮೇಲಿನ 400 ಅಡಿ ಆಳದ ಕಂದಕಕ್ಕೆ ಬಾವಿ ಪತಿಯನ್ನು ತಳ್ಳಿ ಹತ್ಯೆ ಮಾಡಿದ್ದಳು.
ನಿಕಂ ನೇಮಕ?:ಈ ನಡುವೆ, ಖ್ಯಾತ ವಕೀಲ ಉಜ್ವಲ್ ನಿಕಂ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸಿ ತ್ವರಿತ ನ್ಯಾಯಾಲಯದ ವಿಚಾರಣೆ ನಡೆಸಬೇಕೆಂಬ ಕೇತನ್ ಕುಟುಂಬದ ಬೇಡಿಕೆಯನ್ನು ಮಹಾರಾಷ್ಟ್ರ ಸರ್ಕಾರ ಒಪ್ಪಿಕೊಂಡಿದೆ.
==
ಕೇತನ್ ವಿಗ್ ಧರಿಸುತ್ತಿದ್ದಕ್ಕೆ ಕೊಲೆಗೆ ನಿರ್ಧರಿಸಿದ್ದ ಸಿಯಾಪುಣೆ: ಭಾವಿ ಪತಿ ಕೇತನ್ಗೆ ತಲೆಯಲ್ಲಿ ಕೂದಲಿರಲಿಲ್ಲ. ಆತ ವಿಗ್ ಧರಿಸುತ್ತಿದ್ದ. ಹೀಗಾಗಿ ಆತನನ್ನು ಮದುವೆಯಾಗುವುದಕ್ಕೆ ಇಷ್ಟವಿರಲ್ಲದೆ ಕೊಂದೆ ಎಂದು ಸಿಯಾ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ. ‘ಕೇತನ್ ವಿಗ್ ಧರಿಸುತ್ತಿರುವುದು ನನಗೆ ಇಷ್ಟವಿರಲಿಲ್ಲ. ಹಾಗಂತ ಮದುವೆ ರದ್ದುಗೊಳಿಸಿ ತನ್ನ ಮನೆಯವರಿಗೆ ನೋವುಂಟು ಮಾಡಲು ನನಗೆ ಮನಸ್ಸಿರಲಿಲ್ಲ. ಹೀಗಾಗಿ ಆತನನ್ನು ಕೊಲ್ಲುವುದೇ ಸುಲಭದ ನಿರ್ಧಾರ ಎಂದು ನಿರ್ಧರಿಸಿದೆ’ ಎಂದಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಕೇತನ್ ತಂದೆ ವಿಶಾಲ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ‘ಕೇತನ್ ವಿಗ್ ಧರಿಸುತ್ತಿದ್ದನೆಂದು ಸಿಯಾ ಕುಟುಂಬಸ್ಥರಿಗೆ ಮೊದಲೇ ತಿಳಿಸಿದ್ದೆವು. ಆದರೆ ಕೊಲೆಗೆ ಇದೊಂದು ಕಾರಣವೇ?’ ಎಂದು ಪ್ರಶ್ನಿಸಿದ್ದಾರೆ.ಪುಣೆ: ಭಾವಿ ಪತಿ ಕೇತನ್ಗೆ ತಲೆಯಲ್ಲಿ ಕೂದಲಿರಲಿಲ್ಲ. ಆತ ವಿಗ್ ಧರಿಸುತ್ತಿದ್ದ. ಹೀಗಾಗಿ ಆತನನ್ನು ಮದುವೆಯಾಗುವುದಕ್ಕೆ ಇಷ್ಟವಿರಲ್ಲದೆ ಕೊಂದೆ ಎಂದು ಸಿಯಾ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ. ‘ಕೇತನ್ ವಿಗ್ ಧರಿಸುತ್ತಿರುವುದು ನನಗೆ ಇಷ್ಟವಿರಲಿಲ್ಲ. ಹಾಗಂತ ಮದುವೆ ರದ್ದುಗೊಳಿಸಿ ತನ್ನ ಮನೆಯವರಿಗೆ ನೋವುಂಟು ಮಾಡಲು ನನಗೆ ಮನಸ್ಸಿರಲಿಲ್ಲ. ಹೀಗಾಗಿ ಆತನನ್ನು ಕೊಲ್ಲುವುದೇ ಸುಲಭದ ನಿರ್ಧಾರ ಎಂದು ನಿರ್ಧರಿಸಿದೆ’ ಎಂದಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಕೇತನ್ ತಂದೆ ವಿಶಾಲ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ‘ಕೇತನ್ ವಿಗ್ ಧರಿಸುತ್ತಿದ್ದನೆಂದು ಸಿಯಾ ಕುಟುಂಬಸ್ಥರಿಗೆ ಮೊದಲೇ ತಿಳಿಸಿದ್ದೆವು. ಆದರೆ ಕೊಲೆಗೆ ಇದೊಂದು ಕಾರಣವೇ?’ ಎಂದು ಪ್ರಶ್ನಿಸಿದ್ದಾರೆ.