ಕಾಡಿನಿಂದ ನಾಡಿಗೆ ನುಗ್ಗಿದ ಆಫ್ರಿಕಾದಿಂದ ಭಾರತಕ್ಕೆ ಕರೆತಂದಿರುವ ಚೀತಾಗಳ ಮೇಲೆ ಜನರ ಕಲ್ಲೇಟು!

KannadaprabhaNewsNetwork |  
Published : Mar 25, 2025, 12:46 AM ISTUpdated : Mar 25, 2025, 04:29 AM IST
ಚೀತಾ  | Kannada Prabha

ಸಾರಾಂಶ

ಪ್ರಾಜೆಕ್ಟ್‌ ಚೀತಾ ಅಡಿಯಲ್ಲಿ ಆಫ್ರಿಕಾದಿಂದ ಭಾರತಕ್ಕೆ ಕರೆತಂದಿರುವ ಚೀತಾಗಳ ಮೇಲೆ ಜನರು ಕಲ್ಲು ತೂರಾಟ ನಡೆಸಿರುವ ಘಟನೆ ಸೋಮವಾರ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಶಿಯೋಪುರ/ನವದೆಹಲಿ: ಪ್ರಾಜೆಕ್ಟ್‌ ಚೀತಾ ಅಡಿಯಲ್ಲಿ ಆಫ್ರಿಕಾದಿಂದ ಭಾರತಕ್ಕೆ ಕರೆತಂದಿರುವ ಚೀತಾಗಳ ಮೇಲೆ ಜನರು ಕಲ್ಲು ತೂರಾಟ ನಡೆಸಿರುವ ಘಟನೆ ಸೋಮವಾರ ಮಧ್ಯ ಪ್ರದೇಶದಲ್ಲಿ ನಡೆದಿದೆ.

ನಿಗಾ ಘಟಕದಿಂದ ಅರಣ್ಯಕ್ಕೆ ಬಿಟ್ಟಂತಹ ಹೆಣ್ಣು ಚೀತಾ ಜ್ವಾಲಾ ಮತ್ತು ಅದರ 4 ಮರಿಗಳು ಸೋಮವಾರ ಕಾಡಿನಿಂದ ನಾಡಿಗೆ ನುಗ್ಗಿ ಬೆಳಗ್ಗೆ 9 ಗಂಟೆಗೆ ಶಿಯೋಪುರ ಜಿಲ್ಲೆಯ ಬೆಹರ್ದಾ ಹಳ್ಳಿಗೆ ಹಸುವಿನ ಕರುವನ್ನು ಬೇಟೆಯಾಡಲು ತೆರಳಿದ್ದವು. ಇದನ್ನು ಗಮನಿಸಿದ ಸ್ಥಳೀಯರು, ಕೈಯಲ್ಲಿ ಕೋಲು ಹಿಡಿದು, ಬೆದರಿಸಲು ಯತ್ನಿಸಿದ್ದಾರೆ. ಈ ವೇಳೆ ಕೆಲವರು ಚೀತಾಗಳ ಮೇಲೆ ಕಲ್ಲುತೂರಿ ಬೆದರಿಸಿ ದೂರ ಅಟ್ಟಿದ್ದಾರೆ. ಅರಣ್ಯ ಸಿಬ್ಬಂದಿ ಜನರಿಂದ ಚೀತಾಗಳನ್ನು ರಕ್ಷಿಸಿದ್ದಾರೆ.

ಇದರ ಬೆನ್ನಲ್ಲೇ ಪರಿಸರವಾದಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ