ತಲೆಮರೆಸಿಕೊಂಡ ಬೈರತಿಗೆ ಇದೀಗ ‘ಕೋಕಾ’ ಕೋಳ?

KannadaprabhaNewsNetwork |  
Published : Dec 23, 2025, 03:15 AM ISTUpdated : Dec 23, 2025, 05:08 AM IST
Byrathi

ಸಾರಾಂಶ

ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಬೈರತಿ ಬಸವರಾಜು ಅವರಿಗೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ. ಇದರ ನಡುವೆ ಬೈರತಿ ಹಾಗೂ ಅವರ ಆಪ್ತರಿಗೆ ಇದೀಗ ‘ಕೋಕಾ’ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

  ಬೆಂಗಳೂರು :ರಾಜ್ಯ ರಾಜಧಾನಿ ಭಾರತೀನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರೋಪಿ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಬೈರತಿ ಬಸವರಾಜು ಅವರಿಗೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ. ಇದರ ನಡುವೆ ಬೈರತಿ ಹಾಗೂ ಅವರ ಆಪ್ತರಿಗೆ ಇದೀಗ ‘ಕೋಕಾ’ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಏಕೆಂದರೆ, ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮಂಗಳವಾರ ಸಿಐಡಿ ಮೇಲ್ಮನವಿ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.

ತಾಂತ್ರಿಕ ದೋಷದ ಕಾರಣ ನೀಡಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೋಕಾ ಕಾಯ್ದೆ

ತಾಂತ್ರಿಕ ದೋಷದ ಕಾರಣ ನೀಡಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೋಕಾ ಕಾಯ್ದೆ ಹೂಡಿರುವುದನ್ನು ನ್ಯಾಯಾಲಯ ರದ್ದುಪಡಿಸಿದೆ. ಈ ಕಾಯ್ದೆ ಜಾರಿಗೊಂಡರೆ ಆರೋಪಿಗಳಿಗೆ ಒಂದು ವರ್ಷ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ. ಅಲ್ಲದೆ, ನಿರೀಕ್ಷಣಾ ಜಾಮೀನಿಗೆ ಅವಕಾಶವಿರುವುದಿಲ್ಲ. ಹೀಗಾಗಿ ಕೋಕಾ ರದ್ದತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಐಡಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇದರಿಂದ ಈಗಾಗಲೇ ನಿರೀಕ್ಷಣಾ ಜಾಮೀನು ಸಿಗದೆ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಅ‍ವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎನ್ನಲಾಗಿದೆ.

ತೀವ್ರ ತಲಾಶ್‌:

ಇದೇ ವೇಳೆ, 4 ದಿನಗಳಿಂದ ಶಾಸಕರಿಗೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಿಐಡಿ ತೀವ್ರ ತಲಾಶ್ ನಡೆಸಿದರೂ ಸುಳಿವು ಮಾತ್ರ ಸಿಕ್ಕಿಲ್ಲ.ಬೆಳಗಾವಿ ಅಧಿವೇಶನದಲ್ಲಿ ಮೊದಲ ವಾರ ಕಾಣಿಸಿಕೊಂಡಿದ್ದ ಬೈರತಿ ಬಸವರಾಜು ಅವರು ನಂತರ ಕಣ್ಮರೆಯಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಮಾಜಿ ಸಚಿವರಿಗಾಗಿ ಪುಣೆ, ಗೋವಾ ಹಾಗೂ ತಮಿಳುನಾಡಿನಲ್ಲೂ ಸಿಐಡಿ ತಂಡಗಳು ಹುಡುಕಾಟ ನಡೆಸಿವೆ. ಮೊಬೈಲ್ ಸ್ವಿಚ್‌ ಆಫ್ ಮಾಡಿಕೊಂಡಿರುವ ಶಾಸಕರು, ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಅಜ್ಞಾತ ಸ್ಥಳದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಕಿಚ್ಚನ ವೀರಾವೇಶ ದರ್ಶನ್ವಿರುದ್ಧ ಅಲ್ಲ, ಪೈರಸಿ ಬಗ್ಗೆ!
ಜಿ ರಾಮ್‌ ಜಿಗೆ ರಾಜ್ಯ ಶೇ.40ರಷ್ಟು ಪಾಲು ನೀಡಲಾಗದು : ಡಿಕೆಶಿ