ಹೈದರಾಬಾದ್: ಆದಿವಾಸಿ ಮಹಿಳೆಯೊಬ್ಬಳಿಗೆ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಮತ್ತು ಈ ಸಂಬಂಧ ನಡೆದ ಪ್ರತಿಭಟನೆ ಕೋಮುಗಲಭೆ ಸ್ವರೂಪ ಪಡೆದ ಘಟನೆ ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಪ್ರಕರಣ ಹಿನ್ನೆಲೆ:
ಆಸಿಫಾಬಾದ್ ಜಿಲ್ಲೆಯ ಜೈನೂರ್ ಮಂಡಲದಲ್ಲಿ ಮುಸ್ಲಿಂ ಆಟೋರಿಕ್ಷಾ ಚಾಲಕನೊಬ್ಬ ಬುಡಕಟ್ಟು ಮಹಿಳೆಯ ಮೇಲೆ ಲೈಗಿಂಕ ದೌರ್ಜನ್ಯವೆಸಗಿದ್ದ. ಇದನ್ನು ಖಂಡಿಸಿ ಬುಧವಾರ ಬಂದ್ಗೆ ಕರೆ ನೀಡಲಾಗಿತ್ತು. ಈ ವೇಳೆ 2000 ಜನರ ಗುಂಪೊಂದು ಜೈನೂರ್ ಗ್ರಾಮದ ಮೇಲೆ ಏಕಾಏಕಿ ಮಸೀದಿ, ಮನೆಗಳ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.