ಮೋದಿ ‘ಬುಲ್ಡೋಜರ್’ ಹೇಳಿಕೆ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರು

KannadaprabhaNewsNetwork |  
Published : May 19, 2024, 01:45 AM ISTUpdated : May 19, 2024, 07:00 AM IST
Narendra Modi Speech in Haryana

ಸಾರಾಂಶ

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಾಗುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿದೆ.

ನವದೆಹಲಿ: ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಾಗುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿದೆ. 

ಟ್ರಸ್ಟ್‌ ವತಿಯಿಂದ ನಿರ್ಮಾಣ ವಾಗಿರುವ ದೇವಾಲಯದ ವಿಚಾರದಲ್ಲಿ ಬಿಜೆಪಿ ಮತ್ತು ಮೋದಿ ಈ ರೀತಿ ಹೇಳಿಕೆಯನ್ನು ನೀಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. 

ಈ ರೀತಿ ಹೇಳಿಕೆಗಳನ್ನು ನೀಡುವದರಿಂದ ಜನರು ಆಕ್ರೋಶಗೊಳ್ಳುತ್ತಾರೆ. ಪ್ರಚೋದನೆಗೊಳ್ಳುತ್ತಾರೆ. ಸಣ್ಣ ನಾಯಕರು ಈ ರೀತಿ ಹೇಳಿದ್ದರೆ ಗಮನ ಸೆಳೆಯುತ್ತಿರಲಿಲ್ಲ. ಪ್ರಧಾನಿಯ ಹುದ್ದೆಯಲ್ಲಿ ಕುಳಿತು ಮೋದಿಯವರೇ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕಾಂಗ್ರೆಸ್‌ ಒತ್ತಾಯಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!