ಪ್ರಣಾಳಿಕೆಗೆ ಜನರ ಸಲಹೆ ಆಹ್ವಾನಿಸಲು ಕಾಂಗ್ರೆಸ್‌ನಿಂದ ವೆಬ್‌ಸೈಟ್‌

KannadaprabhaNewsNetwork |  
Published : Jan 18, 2024, 02:04 AM ISTUpdated : Jan 18, 2024, 07:18 AM IST
ಕಾಂಗ್ರೆಸ್‌ ಪ್ರಣಾಳಿಕೆ | Kannada Prabha

ಸಾರಾಂಶ

awaazbharatki.in ಅಂತರ್ಜಾಲ ಅಥವಾ awaazbharatki@inc.in ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಸಿದ್ಧಪಡಿಸಲು ಸಲಹೆ ನೀಡುವಂತೆ ಸಾರ್ವಜನಿಕರನ್ನು ಆಹ್ವಾನ ಮಾಡಿದೆ.

ಪಿಟಿಐ ನವದೆಹಲಿ

ಮುಂಬರುವ ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ತಯಾರಿಸಲು ಕಾಂಗ್ರೆಸ್‌ ಪಕ್ಷ ಜನರಿಂದ ಸಲಹೆಗಳನ್ನು ಆಹ್ವಾನಿಸಿದೆ. ಅದಕ್ಕಾಗಿ ಪ್ರತ್ಯೇಕ ವೆಬ್‌ಸೈಟ್‌ awaazbharatki.in ಆರಂಭಿಸಿದೆ. 

awaazbharatki@inc.in ಗೆ ಇ-ಮೇಲ್‌ ಕಳುಹಿಸುವ ಮೂಲಕವೂ ಜನರು ಸಲಹೆ ನೀಡಬಹುದಾಗಿದೆ.ಬುಧವಾರ ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಪಿ.ಚಿದಂಬರಂ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. 

‘ವೆಬ್‌ಸೈಟ್‌ ಹಾಗೂ ಇ-ಮೇಲ್‌ ಮೂಲಕ ಸಲಹೆಗಳನ್ನು ಆಹ್ವಾನಿಸುವುದರ ಜೊತೆಗೆ ಪಕ್ಷವು ನೇರವಾಗಿ ಜನರ ಬಳಿಗೆ ಹೋಗಿ ಸಮಾವೇಶಗಳನ್ನು ನಡೆಸಿ ಸಲಹೆ ಪಡೆಯಲಿದೆ. 

ಲೋಕಸಭೆ ಚುನಾವಣೆಗೆ ಮುನ್ನ ನಾವು ಪ್ರಕಟಿಸುವುದು ‘ಜನರ ಪ್ರಣಾಳಿಕೆ’ ಆಗಿರಲಿದೆ ಎಂದು ಹೇಳಿದರು.

ವೆಬ್‌ಸೈಟ್‌ ಹಾಗೂ ಇ-ಮೇಲ್‌ ಮೂಲಕ ಯಾರು ಬೇಕಾದರೂ ಸಲಹೆಗಳನ್ನು ನೀಡಬಹುದು. ಉತ್ತಮ ಸಲಹೆಗಳನ್ನು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು. 

ಅಧಿಕಾರಕ್ಕೆ ಬಂದರೆ ಅವುಗಳನ್ನು ಜಾರಿಗೊಳಿಸಲಾಗುವುದು. 

ಸಲಹೆ ಸ್ವೀಕರಿಸುವುದಕ್ಕೆ ಪ್ರತಿ ರಾಜ್ಯದಲ್ಲೂ ಕನಿಷ್ಠ ಒಂದು ಸಮಾವೇಶ ಏರ್ಪಡಿಸಲಾಗುವುದು. ಕೆಲ ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ಸಮಾವೇಶ ಏರ್ಪಡಿಸಲಾಗುವುದು. 

ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷಗಳಿಗೆ ಆಸಕ್ತಿಯಿದ್ದರೆ ಅವೂ ಕೂಡ ಸಮಾವೇಶಕ್ಕೆ ಕೈಜೋಡಿಸಬಹುದು ಎಂದು ಚಿದಂಬರಂ ತಿಳಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿಗೆ ಏನು ಮಾಡ್ಬೋದು ನೋಡೋಣ ವಿಪಕ್ಷ ಸಂಚು - ಪ್ರಧಾನಿ ಮೇಲೆ ಹಲ್ಲೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕಾ
ತಿರುಪತಿಯಲ್ಲಿ ಮದುವೆಗೆ ಇನ್ನು ದಕ್ಷಿಣೆ ಇಲ್ಲ!