ದಿಲ್ಲಿ ವಿಧಾನಸಭೆ ಚುನಾವಣೆ - ಗೃಹಜ್ಯೋತಿ, ₹500ಕ್ಕೆ ಎಲ್ಪಿಜಿ, ಉಚಿತ ಪಡಿತರ : ಕಾಂಗ್ರೆಸ್‌

KannadaprabhaNewsNetwork |  
Published : Jan 17, 2025, 12:47 AM ISTUpdated : Jan 17, 2025, 04:47 AM IST
ದೆಹಲಿ ಕಾಂಗ್ರೆಸ್‌ | Kannada Prabha

ಸಾರಾಂಶ

ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಭರವಸೆಗಳ ಸರಣಿಯನ್ನು ಮುಂದುವರೆಸಿದೆ. ಪಕ್ಷ ಅಧಿಕಾರಕ್ಕೇರಿದರೆ 500 ರು.ಗೆ ಎಲ್‌ಪಿಜಿ ಸಿಲಿಂಡರ್‌, ಉಚಿತ ಪಡಿತರ ಹಾಗೂ ಕರ್ನಾಟಕದ ಗೃಹಜ್ಯೋತಿ ಮಾದರಿಯಲ್ಲಿ 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿದೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಭರವಸೆಗಳ ಸರಣಿಯನ್ನು ಮುಂದುವರೆಸಿದೆ. ಪಕ್ಷ ಅಧಿಕಾರಕ್ಕೇರಿದರೆ 500 ರು.ಗೆ ಎಲ್‌ಪಿಜಿ ಸಿಲಿಂಡರ್‌, ಉಚಿತ ಪಡಿತರ ಹಾಗೂ ಕರ್ನಾಟಕದ ಗೃಹಜ್ಯೋತಿ ಮಾದರಿಯಲ್ಲಿ 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿದೆ.

ದೆಹಲಿಯ ಎಐಸಿಸಿ ಉಸ್ತುವಾರಿ ಖ್ವಾಜಿ ನಿಜಾಮುದ್ದೀನ್‌ ಹಾಗೂ ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ದೇವೇಂದ್ರ ಯಾದವ್‌ ಅವರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಈ ಘೋಷಣೆ ಮಾಡಿದ್ದಾರೆ.

ಈ ಮೊದಲು, ಗೃಹಲಕ್ಷಿ ಮಾದರಿಯ ಪ್ಯಾರಿ ದೀದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರು., ಜೀವನ್‌ ರಕ್ಷಕ ಯೋಜನೆಯಡಿ ಪರಿವಾರಗಳಿಗೆ 25 ಲಕ್ಷದ ವರೆಗೆ ಉಚಿತ ಜೀವವಿಮೆ, 1 ವರ್ಷದ ವರೆಗೆ ಶಿಕ್ಷಿತ ನಿರುದ್ಯೋಗಿಗಳಿಗೆ ತಿಂಗಳಿಗೆ 8,500 ರು. ನೀಡುವ ಭರವಸೆ ನೀಡಿತ್ತು. ವಿಶೇಷವೆಂದರೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2000 ರು. ಮತ್ತು ಗೃಹಜ್ಯೋತಿಯಡಿ ಮಾಸಿಕ 200 ಯುನಿಟ್‌ ವಿದ್ಯುತ್‌ ನೀಡುತ್ತಿದೆ. ದೆಹಲಿಯಲ್ಲಿ ಈ ಎರಡರ ಪ್ರಮಾಣವೂ ಹೆಚ್ಚಿದೆ.

70 ಸದಸ್ಯಬಲದ ವಿಧಾನಸಭೆಗೆ ಫೆ.5ರಂದು ಚುನಾವಣೆ ನಡೆಯಲಿದ್ದು, ಫೆ.8ರಂದು ಫಲಿತಾಂಶ ಪ್ರಕಟವಾಗಿಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2025 ಸುಧಾರಣೆಗಳ ಸಾರ್ಥಕ ವರ್ಷ: ಮೋದಿ ಹರ್ಷ
ಪತ್ರಕರ್ತರ ಹಿತರಕ್ಷಣೆಗೆ ಐಎಫ್‌ಡಬ್ಲ್ಯುಜೆ ಆಗ್ರಹ