ಜಾತಿ ಜನಗಣತಿ, ರೈತ ಸಾಲ ಮನ್ನಾ: ರಾಹುಲ್ ಗಾಂಧಿ ಭರವಸೆ

KannadaprabhaNewsNetwork |  
Published : Apr 14, 2024, 01:46 AM ISTUpdated : Apr 14, 2024, 07:19 AM IST
Rahul Gandhi

ಸಾರಾಂಶ

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿ ಆಧರಿತ ಜನಗಣತಿಯನ್ನು ನಡೆಸಲಾಗುವುದು ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಬಸ್ತರ್: ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿ ಆಧರಿತ ಜನಗಣತಿಯನ್ನು ನಡೆಸಲಾಗುವುದು ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಛತ್ತೀಸಗಢದ ಬಸ್ತರ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ಸಂವಿಧಾನವನ್ನು ನಾಶ ಮಾಡುವ ಹಾಗೂ ಉಳಿಸಲು ಪ್ರಯತ್ನಿಸುತ್ತಿರುವವರ ನಡುವೆ ನಡೆಯುತ್ತಿರುವ ಯುದ್ಧ. ಈ ಯುದ್ಧದಲ್ಲಿ ಜಯಶೀಲರಾಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ರಾಮ ಮಂದಿರ ಉದ್ಘಾಟನೆ ವೇಳೆ ಬುಡಕಟ್ಟು ಜನಾಂಗದ ಮಹಿಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ. ಇದು ಮೋದಿ ಸರ್ಕಾರ ಬುಡಕಟ್ಟು ಜನಾಂಗಕ್ಕೆ ಕೊಡುವ ಗೌರವ ಎಂದು ಆರೋಪಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ