ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

KannadaprabhaNewsNetwork |  
Published : Nov 19, 2024, 12:45 AM ISTUpdated : Nov 19, 2024, 04:58 AM IST
ನಿರ್ಮಲಾ ಸೀತಾರಾಮನ್ | Kannada Prabha

ಸಾರಾಂಶ

  ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು. ಹಾಗೆಯೇ, ಅಡ್ಡದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನೂ ನಿಲ್ಲಿಸಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ

 ಮುಂಬೈ : ದೇಶದಲ್ಲಿ ಬ್ಯಾಂಕ್‌ ಸಾಲದ ಮೇಲಿನ ಬಡ್ಡಿ ದರಗಳು ದುಬಾರಿಯಾಗಿದ್ದು, ಕೆಲ ವರ್ಗಗಳ ಜನರಿಗೆ ಒತ್ತಡ ತರುವಂತಿವೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು. ಹಾಗೆಯೇ, ಅಡ್ಡದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನೂ ನಿಲ್ಲಿಸಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಎಸ್‌ಬಿಐ ಆಯೋಜಿಸಿದ್ದ ವಾಣಿಜ್ಯ ಶೃಂಗದಲ್ಲಿ ಸೋಮವಾರ ಮಾತನಾಡಿದ ನಿರ್ಮಲಾ, ‘ಆರ್ಥಿಕತೆಗೆ ದೇಶೀಯವಾಗಿ ಹಾಗೂ ಜಾಗತಿಕವಾಗಿ ಇರುವ ಸವಾಲುಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ. ಅದರ ಬಗ್ಗೆ ನೀವು ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಬಹಳ ಮುಖ್ಯವಾಗಿ, ದೇಶದಲ್ಲಿ ಬ್ಯಾಂಕ್‌ ಸಾಲ ಪಡೆಯುವುದು ತುಂಬಾ ದುಬಾರಿ ಎಂಬ ಮಾತುಗಳು ಕೇಳಿಬರುತ್ತಿವೆ. ಉದ್ದಿಮೆಗಳು ಚೆನ್ನಾಗಿ ಕೆಲಸ ಮಾಡಬೇಕು ಅಂದರೆ ಬ್ಯಾಂಕ್‌ ಸಾಲದ ಬಡ್ಡಿ ದರಗಳು ಕೈಗೆಟಕುವಂತಿರಬೇಕು. ಹೀಗಾಗಿ ಬಡ್ಡಿ ದರಗಳನ್ನು ಇಳಿಕೆ ಮಾಡಿ’ ಎಂದು ಸೂಚಿಸಿದರು.

ಬ್ಯಾಂಕ್‌ಗಳು ತಮ್ಮ ಮೂಲಭೂತ ಕರ್ತವ್ಯವಾದ ಸಾಲ ನೀಡಿಕೆಯ ಬಗ್ಗೆ ಗಮನ ಕೇಂದ್ರೀಕರಿಸಬೇಕು. ಅಡ್ಡದಾರಿಯಲ್ಲಿ ವಿಮಾ ಪಾಲಿಸಿಗಳನ್ನು ಮಾರಾಟ ಮಾಡುವುದು ಕೂಡ ಸಾಲ ಪಡೆಯುವವರ ಹೊರೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ