ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೋರ್ಡಿಂಗ್ಸ್ ಅಳವಡಿಕೆಯಲ್ಲಿ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ನಾಯಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೆಹಲಿ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ. ಅರವಿಂದ್ ಕೇಜ್ರಿವಾಲ್, ಆಗಿನ ಶಾಸಕ ಗುಲಾಬ್ ಸಿಂಗ್ ಹಾಗೂ ಆಗಿನ ದ್ವಾರಕಾ ಎ ವಾರ್ಡ್ ಕೌನ್ಸಿಲರ್ ನಿತಿಕಾ ಶರ್ಮಾ ಅವರು ವಿವಿಧ ಸ್ಥಳಗಳಲ್ಲಿ ದೊಡ್ಡ ಗಾತ್ರದ ಹೋರ್ಡಿಂಗ್ಸ್ಗಳನ್ನು ಹಾಕುವ ಮೂಲಕ ಸಾರ್ವಜನಿಕ ಹಣವನ್ನು ಉದ್ದೇಶಪೂರ್ವಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಕ್ಷಣವೇ ಎಫ್ಐಆರ್ ದಾಖಲಿಸುವಂತೆ ಸೂಚಿಸಿದೆ.
ಪೋಪ್ ಫ್ರಾನ್ಸಿಸ್ ಪ್ರಾಣಾಪಾಯದಿಂದ ಪಾರು: ವೈದ್ಯರ ಘೋಷಣೆ
ವ್ಯಾಟಿಕನ್: ಕ್ರೈಸ್ತರ ಪರಮೋಚ್ಚ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ನ್ಯುಮೋನಿಯಾದಿಂದ ಗುಣಮುಖರಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಯುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.‘ಅವರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆ ಆರೋಗ್ಯದಲ್ಲಿ ಉಂಟಾಗಿದ್ದ ವೈಪರೀತ್ಯವನ್ನು ಗಮನದಲ್ಲಿಟ್ಟುಕೊಂಡು ಇನ್ನಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಯನ್ನು ಮುಂದುವರೆಸುವುದು ಅಗತ್ಯವಾಗಿದೆ’ ಎಂದು ವ್ಯಾಟಿಕನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ಪೋಪ್ ಫ್ರಾನ್ಸಿಸ್ ನ್ಯುಮೋನಿಯಾ, ಕಿಡ್ನಿ ವೈಫಲ್ಯ, ಶ್ವಾಸಕೋಶದ ಸೋಂಕು ಹಾಗೂ ಸೆಪ್ಸಿಸ್ನಿಂದ ಕಳೆದ 3 ವಾರಗಳಿಂದ ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏ.1ರಿಂದ ಖಾದಿ ಗ್ರಾಮೋದ್ಯೋಗ ನೌಕರರ ವೇತನ ಶೇ.20 ಹೆಚ್ಚಳ
ಪ್ರಸ್ತುತ, ಚರಕದಲ್ಲಿ 1 ಲಡಿ ನೂಲಲು 12.50 ರು. ನೀಡಲಾಗುತ್ತಿದ್ದು, ಪರಿಷ್ಕೃತ ವೇತನದ ಪ್ರಕಾರ 15 ರು. ನೀಡಲಾಗುತ್ತದೆ.
ಪಾಕಿಸ್ತಾನ ರಾಜತಾಂತ್ರಿಕ ಅಮೆರಿಕದಿಂದ ಗಡೀಪಾರು
ವಾಗನ್ ಅವರ ಬಳಿ ಅಧಿಕೃತ ವೀಸಾ, ಪ್ರಯಾಣ ದಾಖಲೆಗಳಿದ್ದರೂ ಏರ್ಪೋರ್ಟಿಂದ ವಾಪಸ್ ಕಳುಹಿಸಲಾಗಿದೆ. ಅವರ ಭೇಟಿ ಕುರಿತು ವಲಸೆ ಅಧಿಕಾರಿಗಳಿಂದ ಕೆಲ ಆಕ್ಷೇಪಗಳು ವ್ಯಕ್ತವಾದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.ಮೂಲಗಳ ಪ್ರಕಾರ, ವಾಗಾನ್ ಅವರಿಗೆ ಸದ್ಯದಲ್ಲೇ ಪಾಕಿಸ್ತಾನ ಸರ್ಕಾರವು ಸಮನ್ಸ್ ಜಾರಿ ಮಾಡಿ ಘಟನೆ ಕುರಿತು ವಿವರಣೆ ಕೇಳುವ ಸಾಧ್ಯತೆ ಇದೆ.
ಕೆನಡಾದ ಸ್ಟೀಲ್, ಅಲ್ಯುಮಿನಿಯಂ ಮೇಲೆ ಶೇ.50 ತರಿಗೆ: ಟ್ರಂಪ್