ಪುದುಚೇರಿ ಕರಾವಳಿಗೆ ಅಪ್ಪಳಿಸಿದ್ದ ‘ಫೆಗಲ್‌'' ಚಂಡಮಾರುತ ನಿರ್ಗಮನ: ಆದರೂ ಭಾರಿ ಹಾನಿ

KannadaprabhaNewsNetwork |  
Published : Dec 02, 2024, 01:21 AM ISTUpdated : Dec 02, 2024, 04:38 AM IST
ಸೈಕ್ಲೋನ್‌ | Kannada Prabha

ಸಾರಾಂಶ

 ಪುದುಚೇರಿ ಕರಾವಳಿಗೆ ಶನಿವಾರ ಅಪ್ಪಳಿಸಿದ್ದ ‘ಫೆಗಲ್‌'' ಚಂಡಮಾರುತ ಭಾನುವಾರ ದುರ್ಬಲಗೊಂಡಿದ್ದರೂ ಭಾರೀ ಮಳೆಯಿಂದಾಗಿ ಈ ಪುಟ್ಟ ಕೇಂದ್ರಾಡಳಿತ ಪ್ರದೇಶ ಹಾಗೂ ನೆರೆಯ ತಮಿಳುನಾಡಿನ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ

ಪುದುಚೇರಿ/ಚೆನ್ನೈ: ಪುದುಚೇರಿ ಕರಾವಳಿಗೆ ಶನಿವಾರ ಅಪ್ಪಳಿಸಿದ್ದ ‘ಫೆಂಗಲ್‌’ ಚಂಡಮಾರುತ ಭಾನುವಾರ ದುರ್ಬಲಗೊಂಡಿದ್ದರೂ ಭಾರೀ ಮಳೆಯಿಂದಾಗಿ ಈ ಪುಟ್ಟ ಕೇಂದ್ರಾಡಳಿತ ಪ್ರದೇಶ ಹಾಗೂ ನೆರೆಯ ತಮಿಳುನಾಡಿನ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ಹಾಗೂ 4 ಜನರ ಬಲಿ ಪಡೆದಿದೆ. 3 ದಶಕದಲ್ಲಿ ಇದೇ ಮೊದಲ ಬಾರಿಗೆ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ.

ಅಪಾರ ಪ್ರಮಾಣದ ಬೆಳೆ ಹಾನಿ, ಆಸ್ತಿ ಹಾನಿಯ ವರದಿಯಾಗಿದ್ದು, ಸಮೀಕ್ಷೆ ನಂತರ ನಿಖರ ಅಂಕಿ-ಅಂಶ ಲಭಿಸಲಿವೆ. ಪ್ರವಾಹದಿಂದ ಸಂತ್ರಸ್ತರಾಗಿರುವವರ ಸ್ಥಳಾಂತರಕ್ಕೆ ಇದೀಗ ಸೇನೆ ಕೂಡ ಕೈಜೋಡಿಸಿದೆ.

ಪುದುಚೇರಿ ತತ್ತರ:

ಭಾನುವಾರದ ಅಂಕಿ-ಅಂಶ ಪ್ರಕಾರ ಭಾನುವಾರ 24 ಗಂಟೆ ಅವಧಿಯಲ್ಲಿ ಪುದುಚೇರಿಯಲ್ಲಿ 46 ಸೆ.ಮೀ.ನಷ್ಟು ಮಳೆಯಾಗಿದೆ. ಅಕ್ಟೋಬರ್‌ 31, 2004ರಂದು ಪುದುಚೇರಿ ದಾಖಲೆಯ 21 ಸೆ.ಮೀ. ಮಳೆ ಕಂಡಿತ್ತು. ಆ ಬಳಿಕ ಈ ಪ್ರಮಾಣದಲ್ಲಿ ಮಳೆಯಾಗಿದ್ದು 3 ದಶಕದಲ್ಲಿ ಇದೇ ಮೊದಲು. ಪುದುಚೇರಿಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಹಲವು ಜನವಸತಿ, ವಾಣಿಜ್ಯ ಪ್ರದೇಶಗಳು ಜಲಾವೃತವಾಗಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸೇನೆ ಕೈಜೋಡಿಸಿದ್ದು, ಪ್ರವಾಹದಲ್ಲಿ ಕ್ಕಿಹಾಕಿಕೊಂಡಿದ್ದ 200ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

ತಮಿಳ್ನಾಡಲ್ಲೂ ಅಸ್ತವ್ಯಸ್ತ:

ಚಂಡಮಾರುತದ ಪರಿಣಾಮ ನೆರೆಯ ತಮಿಳುನಾಡು ಜಿಲ್ಲೆಯ ವಿಲ್ಲುಪುರಂ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು, ಮೈಲಾಂ ಪ್ರದೇಶದಲ್ಲಿ 50 ಸೆ.ಮೀ. ಮಳೆ ದಾಖಲಾಗಿದೆ. ಚಂಡಮಾರುತದಿಂದಾಗಿ ಶನಿವಾರ ಸ್ಥಗಿತಗೊಂಡಿದ್ದ ಚೆನ್ನೈ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನರ್‌ ಆರಂಭಗೊಂಡಿದ್ದು, ಭಾನುವಾರ ಬೆಳಗ್ಗೆಯಿಂದ ಹಲವು ವಿಮಾನಗಳ ಹಾರಾಟ ವಿಳಂಬ ಮತ್ತು ರದ್ದಾಗಿದ್ದು, ಬೆಂಗಳೂರಿಗೆ ಅನೇಕ ವಿಮಾನ ತಿರುಗಿಸಲಾಗಿತ್ತು. ಮಧ್ಯಾಹ್ನದ ಬಳಿಕ ವಿಮಾನ ಸಂಚಾರ ಸಹಜ ಸ್ಥಿತಿಗೆ ಮರಳಿದೆ.

ಚಂಡಮಾರುತ ದುರ್ಬಲಗೊಂಡಿದ್ದರೂ ಮುಂದಿನ 24 ಗಂಟೆಗಳಲ್ಲಿ ಪುದುಚೇರಿ, ತಮಿಳುನಾಡು ಮಾತ್ರವಲ್ಲದೆ ಆಂಧ್ರದ ತಿರುಪತಿ, ನೆಲ್ಲೂರು ಮತ್ತು ಚಿತ್ತೂರಿನಲ್ಲೂ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

PREV

Recommended Stories

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ವಿರುದ್ಧ ಕೇಂದ್ರಕ್ಕೆ ಮಹಾ ದೂರು
ಸನಾತನ ಧರ್ಮದ ಕೊಂಡಿ ಕಳಚಲು ಶಿಕ್ಷಣದಿಂದ ಮಾತ್ರ ಸಾಧ್ಯ: ಕಮಲ್‌