ಚಂಡಮಾರುತ ಸ್ವರೂಪ ಪಡೆದ ನೈಋತ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತ : ಭಾರತೀಯ ಹವಾಮಾನ ಇಲಾಖೆ

KannadaprabhaNewsNetwork |  
Published : Nov 30, 2024, 12:49 AM ISTUpdated : Nov 30, 2024, 04:55 AM IST
ಚಂಡಮಾರುತ | Kannada Prabha

ಸಾರಾಂಶ

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಚೆನ್ನೈ: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೊತೆಗೆ ಈಗಾಗಲೇ ಫೆಂಗಲ್‌ ಎಂದು ಹೆಸರಿಡಲಾಗಿರುವ ಚಂಡಮಾರುತವು ನ.30ರ ಮಧ್ಯಾಹ್ನದ ವೇಳೆಗೆ ಪುದುಚೇರಿ ಮೇಲೆ ಅಪ್ಪಳಿಸಲಿದೆ. ಈ ವೇಳೆ ಗಂಟೆಗೆ 90 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕ್ರಮೇಣ ಚಂಡಮಾರುತ ತನ್ನ ಪ್ರಭಾವ ಕಳೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಫೆಂಗಲ್‌ ಪರಿಣಾಮ ಕಳೆದ 3 ದಿನಗಳಿಂದಲೂ ತಮಿಳುನಾಡು, ಆಂಧ್ರದ ಕರಾವಳಿ, ಕೇರಳ ಮತ್ತು ಪುದುಚೇರಿಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಶುಕ್ರವಾರವೂ ಅದು ಮುಂದುವರೆದಿದೆ. ಕೇರಳ, ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಡಿ.1 ಮತ್ತು ಡಿ.2ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ :ಹೊಸ ನಿಯಮದಲ್ಲೇನಿದೆ?
ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ