ಧನತ್ರಯೋದಶಿ ವೇಳೆ ದೇಶವ್ಯಾಪಿ₹1 ಲಕ್ಷ ಕೋಟಿ ದಾಖಲೆ ವ್ಯಾಪಾರ

KannadaprabhaNewsNetwork |  
Published : Oct 19, 2025, 01:03 AM IST
ಹಬ್ಬ | Kannada Prabha

ಸಾರಾಂಶ

ಈ ವರ್ಷ ಧನತ್ರಯೋದಶಿ ಪ್ರಯುಕ್ತ ದೇಶಾದ್ಯಂತ ಖರೀದಿ ಭರಾಟೆ ಜೋರಾಗಿದ್ದು, 1 ಲಕ್ಷ ಕೋಟಿ ರು.ಗೂ ಅಧಿಕ ಮೊತ್ತದ ವ್ಯಾಪಾರ ನಡೆದಿದೆ. ಇದು ಇತ್ತೀಚಿನ ವರ್ಷಗಳಲ್ಲೇ ಹಬ್ಬದ ಋತುವಿನಲ್ಲಿ ನಡೆದ ಅತಿ ದೊಡ್ಡ ವಹಿವಾಟು ಎಂದು ವ್ಯಾಪಾರಿ ಒಕ್ಕೂಟ ಅಂದಾಜಿಸಿದೆ.

-₹60,000 ಕೋಟಿ ಮೊತ್ತದ ಚಿನ್ನ, ಬೆಳ್ಳಿ ಮಾರಾಟ

-₹10,000 ಕೋಟಿ ಎಲೆಕ್ಟ್ರಿಕಲ್‌ ವಸ್ತುಗಳು ಬಿಕರಿ

ನವದೆಹಲಿ: ಈ ವರ್ಷ ಧನತ್ರಯೋದಶಿ ಪ್ರಯುಕ್ತ ದೇಶಾದ್ಯಂತ ಖರೀದಿ ಭರಾಟೆ ಜೋರಾಗಿದ್ದು, 1 ಲಕ್ಷ ಕೋಟಿ ರು.ಗೂ ಅಧಿಕ ಮೊತ್ತದ ವ್ಯಾಪಾರ ನಡೆದಿದೆ. ಇದು ಇತ್ತೀಚಿನ ವರ್ಷಗಳಲ್ಲೇ ಹಬ್ಬದ ಋತುವಿನಲ್ಲಿ ನಡೆದ ಅತಿ ದೊಡ್ಡ ವಹಿವಾಟು ಎಂದು ವ್ಯಾಪಾರಿ ಒಕ್ಕೂಟ ಅಂದಾಜಿಸಿದೆ.

ಆಶ್ವಯುಜ ಮಾಸದ 13ನೇ ದಿನವನ್ನು ‘ಧನತ್ರಯೋದಶಿ’ ಎಂದು ಆಚರಿಸಲಾಗುತ್ತಿದೆ. ಈ ದಿನ ಆಭರಣ, ವಾಹನ ಇನ್ನಿತರ ವಸ್ತುಗಳನ್ನು ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಇದರ ಜೊತೆಗೆ ಈ ವರ್ಷ ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿದ್ದರಿಂದ ವಸ್ತುಗಳ ಬೆಲೆ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಭರ್ಜರಿ ಖರೀದಿ ನಡೆಯುತ್ತಿದೆ.

60,000 ಕೋಟಿ ರು.ಗೂ ಅಧಿಕ ಮೊತ್ತದ ಚಿನ್ನ ಮತ್ತು ಬೆಳ್ಳಿ ಮಾರಾಟವಾಗಿದೆ. ದೆಹಲಿ ಮಾರುಕಟ್ಟೆಯಲ್ಲಿ 10,000 ಕೋಟಿ ರು.ಗಳ ಸ್ಥಳೀಯ ಉತ್ಪನ್ನಗಳು ಬಿಕರಿಯಾಗಿವೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.25 ಹೆಚ್ಚು. ಇನ್ನು 15,000 ಕೋಟಿ ರು.ಗಳ ಅಡುಗೆ ಪಾತ್ರೆ ಮತ್ತು ಉಪಕರಣಗಳು, 10,000 ಕೋಟಿ ರು.ಗಳ ಎಲೆಕ್ಟ್ರಾನಿಕ್‌ ಮತ್ತು ಎಲೆಕ್ಟ್ರಿಕಲ್‌ ವಸ್ತುಗಳು, 3,000 ಕೋಟಿ ರು.ಗಳ ಆಲಂಕಾರಿಕ ಮತ್ತು ಪೂಜಾ ಉತ್ಪನ್ನಗಳು, 12,000 ಕೋಟಿ ರು.ಗಳ ಒಣಹಣ್ಣು, ಸಿಹಿತಿಂಡಿ ಮತ್ತು ವಾಹನಗಳು ಮಾರಾಟವಾಗಿವೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಪ್ರವೀಣ್ ಖಂಡೇಲ್ವಾಲ್ ಮಾಹಿತಿ ನೀಡಿದ್ದಾರೆ.

==

ಧನತ್ರಯೋದಶಿ: 2 ದಿನದಲ್ಲಿ 75000 ಕಾರುಗಳ ಮಾರಾಟ

ನವದೆಹಲಿ: ಧನ ತ್ರಯೋದಶಿ ಅಂಗವಾಗಿ ದೇಶದಲ್ಲಿ ಭರ್ಜರಿ ಕಾರು ಮಾರಾಟ ಆರಂಭವಾಗಿದ್ದು ಅ.18 ಮತ್ತು 19ರಂದು ಒಟ್ಟಾರೆ 50000 ಕಾರು ಮಾರಾಟವಾಗುವ ನಿರೀಕ್ಷೆ ಇದೆ.ಮಾರುತಿ ಸುಜುಕಿ ಶನಿವಾರ 40000ಕ್ಕೂ ಹೆಚ್ಚು ಕಾರು ವಿತರಿಸಿದೆ. ಭಾನುವಾರ ಇನ್ನೂ 10000ಕ್ಕೂ ಅಧಿಕ ಕಾರು ವಿತರಣೆ ಗುರಿ ಹಾಕಿಕೊಂಡಿದೆ. ಇನ್ನು ಹುಂಡೈ ಎರಡು ದಿನದಲ್ಲಿ 15000ಕ್ಕೂ ಹೆಚ್ಚು ಕಾರು ವಿತರಣೆ ಗುರಿ ಹೊಂದಿದೆ. ಇನ್ನು ಉಳಿದ ಕಂಪನಿಗಳ ಕಾರಿನ ವಿತರಣೆಯನ್ನ ಸೇರಿದರೆ ಅದು 75000 ದಾಟುವ ಸಾಧ್ಯತೆ ನಿಚ್ಚಳವಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಹಿಂದಿ ಹೇರಿಕೆ ಬಗ್ಗೆ ನ್ಯಾ। ನಾಗರತ್ನ ಬೇಸರ
ಇಂಡಿಗೋ ವಿಮಾನ ರದ್ದತಿ ಕೊಂಚ ಸರಿ ದಾರಿಗೆ