ಹಣೆಗೆ ಕುಂಕುಮ, ಕೈಗೆ ಪವಿತ್ರ ದಾರಬೇಡ : ಡಿಎಂಕೆ ಪಕ್ಷದ ಕಾರ್ಯಕರ್ತರಿಗೆ ರಾಜಾ ಕರೆ

KannadaprabhaNewsNetwork |  
Published : Apr 04, 2025, 12:48 AM ISTUpdated : Apr 04, 2025, 04:19 AM IST
ರಾಜಾ | Kannada Prabha

ಸಾರಾಂಶ

ಡಿಎಂಕೆ ಪಕ್ಷದ ಕಾರ್ಯಕರ್ತರು ಹಣೆಗೆ ಕುಂಕುಮ ಹಾಗೂ ಕೈಗೆ ಪವಿತ್ರ ದಾರ ಧರಿಸಕೂಡದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ. ರಾಜಾ ವಿವಾದಾತ್ಮಕ ಸಲಹೆ ನೀಡಿದ್ದಾರೆ.

ಚೆನ್ನೈ: ಡಿಎಂಕೆ ಪಕ್ಷದ ಕಾರ್ಯಕರ್ತರು ಹಣೆಗೆ ಕುಂಕುಮ ಹಾಗೂ ಕೈಗೆ ಪವಿತ್ರ ದಾರ ಧರಿಸಕೂಡದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ. ರಾಜಾ ವಿವಾದಾತ್ಮಕ ಸಲಹೆ ನೀಡಿದ್ದಾರೆ.

ನೀಲಗಿರಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಡಿಎಂಕೆ ಕಾರ್ಯಕರ್ತರು ಸಂಘಿಗಳಂತೆ (ಆರ್‌ಎಸ್‌ಎಸ್‌ ಸ್ವಯಂಸೇವಕರು) ವೇಷಭೂಷಣ ಧರಿಸಬಾರದು. ಹಣೆಗೆ ಕುಂಕುಮ ಹಾಗೂ ಕೈಗೆ ಪವಿತ್ರ ದಾರವನ್ನು ಸಂಘಿಗಳು ಧರಿಸುತ್ತಾರೆ. ಇದರಿಂದ ಅವರು ಮತ್ತು ನಿಮ್ಮನ್ನು ಗುರುತು ಹಿಡಿಯುವುದು ಕಷ್ಟವಾಗುತ್ತದೆ. ಕನಿಷ್ಠ ಪಕ್ಷ ವಿದ್ಯಾರ್ಥಿ ಕಾರ್ಯಕರ್ತರಾದರೂ ಕುಂಕುಮ ತೆಗೆಯಿರಿ. ನಿಮ್ಮ ಪೋಷಕರು ನಿಮ್ಮ ಹಣೆಯ ಮೇಲೆ ವಿಭೂತಿಯನ್ನು ಇಟ್ಟರೆ, ಅದನ್ನು ಇಟ್ಟುಕೊಳ್ಳಿ. ಆದರೆ ಡಿಎಂಕೆ ಧೋತಿ ಧರಿಸಿದ ನಂತರ ಅಥವಾ ಪಕ್ಷದ ಕಾರ್ಯಕ್ರಮಕ್ಕೆ ಬಂದಾಗ ಅದನ್ನು ತೆಗೆದುಹಾಕಿ’ ಎಂದು ಮನವಿ ಮಾಡಿದ್ದಾರೆ.

ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಗುರಿಯಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ