ಪ್ರತಿಜ್ಞೆ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತೆ ಬಳೆ ಎಗರಿಸಲು ಯತ್ನಿಸಿದ ಡಿಎಂಕೆ ಕಾರ್ಪೊರೇಟರ್

KannadaprabhaNewsNetwork |  
Published : Mar 06, 2025, 12:30 AM ISTUpdated : Mar 06, 2025, 05:18 AM IST
ಡಿಎಂಕೆ | Kannada Prabha

ಸಾರಾಂಶ

ಹಿಂದಿ ಹೇರಿಕೆ ವಿರುದ್ಧ ಡಿಎಂಕೆ ಕಾರ್ಯಕರ್ತರು ಪ್ರತಿಜ್ಞೆ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಪಕ್ಷದ ಕಾರ್ಪೊರೇಟರ್‌ ಒಬ್ಬರು ಕಾರ್ಯಕರ್ತೆಯ ಬಳೆ ಎಗರಿಸಲು ಯತ್ನಿಸಿದ ಘಟನೆ ನಡೆದಿದೆ.

ಚೆನ್ನೈ: ಹಿಂದಿ ಹೇರಿಕೆ ವಿರುದ್ಧ ಡಿಎಂಕೆ ಕಾರ್ಯಕರ್ತರು ಪ್ರತಿಜ್ಞೆ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಪಕ್ಷದ ಕಾರ್ಪೊರೇಟರ್‌ ಒಬ್ಬರು ಕಾರ್ಯಕರ್ತೆಯ ಬಳೆ ಎಗರಿಸಲು ಯತ್ನಿಸಿದ ಘಟನೆ ನಡೆದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಘಟನೆ 30 ಸೆಕೆಂಡ್‌ಗಳ ವಿಡಿಯೋ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು ‘ಕಳ್ಳರು ಮತ್ತು ಡಿಎಂಕೆಯನ್ನು ಎಂದಿಗೂ ಪ್ರತ್ಯೇಕಿಸಲು ಸಾಧ್ಯವಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಕಳ್ಳತನಕ್ಕೆ ಯತ್ನಿಸಿದ ಕಾರ್ಪೊರೇಟರ್‌ನ್ನು ಡಿಎಂಕೆಯ ಕುನೂರು ಪುರಸಭೆಯ ಕೌನ್ಸಿಲರ್‌ ಜಾಕಿರ್‌ ಹುಸೇನ್ ಎಂದು ಗುರುತಿಸಲಾಗಿದೆ. ಹುಸೇನ್ ಮಹಿಳೆಯೊಬ್ಬರ ಕೈಯಿಂದ ಚಿನ್ನದ ಬಳೆ ತೆಗೆಯಲು ಯತ್ನಿಸಿದ್ದರು. ಈ ವೇಳೆ ಮತ್ತೊಬ್ಬ ಕಾರ್ಯಕರ್ತೆ ಅದನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಹುಸೇನ್‌ ಮತ್ತೆ ಪ್ರಯತ್ನಿಸಿದ್ದಾರೆ. ಈ ವಿಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಾಂಗ್ಲಾ ಹಿಂದು ಯುವಕನ ನರಮೇಧಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ । ಇಸ್ಲಾಮಿಕ್‌ ನಾಯಕನ ಹತ್ಯೆ ಬೆನ್ನಲ್ಲೇ ಹಿಂಸೆಟಾಪ್‌- ಬಾಂಗ್ಲಾ ಶೇಕ್‌- ಭಾರತೀಯ ರಾಯಭಾರಿಗಳ ಮನೆಗೆ ಕಲ್ಲೆಸೆತ । ಭಾರತ, ಹಿಂದು ವಿರೋಧಿ ಘೋಷಣೆ
ಹೂಡಿಕೆಗೆ ಕರೆ ನೀಡುವ ಸುಧಾಮೂರ್ತಿ ಡೀಪ್‌ಫೇಕ್‌ ವಿಡಿಯೋ ವೈರಲ್‌