12 ರಾಜ್ಯಗಳಲ್ಲಿ ಎಸ್‌ಐಆರ್‌ ಗಡುವು 1 ವಾರ ವಿಸ್ತರಣೆ

KannadaprabhaNewsNetwork |  
Published : Dec 01, 2025, 01:45 AM IST
SIR

ಸಾರಾಂಶ

ದೇಶದ 9 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸದ್ಯ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆಯ (ಎಸ್ಐಆರ್‌) ವೇಳಾಪಟ್ಟಿಯನ್ನು 1 ವಾರ ಕಾಲ ವಿಸ್ತರಿಸಿ ಚುನಾವಣಾ ಆಯೋಗ ಆದೇಶಿಸಿದೆ.

ನವದೆಹಲಿ: ದೇಶದ 9 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸದ್ಯ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆಯ (ಎಸ್ಐಆರ್‌) ವೇಳಾಪಟ್ಟಿಯನ್ನು 1 ವಾರ ಕಾಲ ವಿಸ್ತರಿಸಿ ಚುನಾವಣಾ ಆಯೋಗ ಆದೇಶಿಸಿದೆ. 

ಇದೀಗ ಡಿ.11ರ ತನಕ ಮುಂದೂಡಿಕೆ

ಆಯೋಗ ಈ ಹಿಂದೆ ನೀಡಿದ ಆದೇಶದ ಪ್ರಕಾರ ಡಿ.4ಕ್ಕೆ ಈ ರಾಜ್ಯಗಳಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಮುಗಿಯಬೇಕಿತ್ತು. ಆದರೆ ಅದನ್ನು ಇದೀಗ ಡಿ.11ರ ತನಕ ಮುಂದೂಡಿಕೆ ಮಾಡಿದೆ. ಈ ಪ್ರಕಾರ ವಿಶೇಷ ಮತಪಟ್ಟಿಯ ಕರಡುಪಟ್ಟಿಯು ಡಿ.9ರ ಬದಲು 16ಕ್ಕೆ ಪ್ರಕಟವಾಗಲಿದೆ. ಅಂತಿಮ ಮತದಾರ ಪಟ್ಟಿಯು ಮುಂದಿನ ವರ್ಷದ ಫೆಬ್ರವರಿ 14ಕ್ಕೆ ಪ್ರಕಟವಾಗಲಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌, ‘ಪರಿಷ್ಕರಣೆಯನ್ನು ಗಡಿಬಿಡಿ ಮಾಡಿ ಮುಗಿಸಲಾಗದು ಎಂದು ಚುನಾವಣಾ ಆಯೋಗಕ್ಕೆ ಈಗ ಅರಿವಾದಂತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಮತಪಟ್ಟಿ ಪರಿಷ್ಕರಣೆ ಒತ್ತಡ?: ಮತ್ತಿಬ್ಬರು ಬಿಎಲ್‌ಒಗಳು ಸಾವು 

ಜೈಪುರ: ದೇಶದಲ್ಲಿ ಬಿಎಲ್‌ಒಗಳ (ಬೂತ್‌ ಮಟ್ಟದ ಅಧಿಕಾರಿ) ಸಾವಿನ ಸರಣಿ ಮುಂದುವರಿದಿದೆ. ರಾಜಸ್ಥಾನದಲ್ಲಿ ಓರ್ವ ಬಿಎಲ್‌ಒ ಕುಸಿದು ಬಿದ್ದು ಸಾವನ್ನಪ್ಪಿದರೆ, ಉತ್ತರ ಪ್ರದೇಶದಲ್ಲಿ ಒಬ್ಬ ಬಿಎಲ್‌ಒ ಆತ್ಮ*ತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎಸ್‌ಐಆರ್‌ ವೇಳೆ ಮೃತಪಟ್ಟ ಸಿಬ್ಬಂದಿ ಸಂಖ್ಯೆ 14ಕ್ಕೇರಿಕೆಯಾಗಿದೆ.

ರಾಜಸ್ಥಾನದ ಧೋಲ್ಪುರದಲ್ಲಿ ಬಿಎಲ್ಒ ಆಗಿ ಕೆಲಸ ಮಾಡುತ್ತಿದ್ದ ಶಿಕ್ಷಕ ಅನುಜ್‌ ಗರ್ಗ್‌ ಶನಿವಾರ ತಡರಾತ್ರಿ ತಮ್ಮ ಮನೆಯಲ್ಲಿಯೇ ಮತಪಟ್ಟಿ ಪರಿಷ್ಕರಣೆ ಡೇಟಾ ಅಪ್ಲೋಡ್‌ ಮಾಡುತ್ತಿದ್ದರು. ಈ ವೇಳೆ ಇದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ‘ಅನುಜ್‌ ಕೆಲಸದೊತ್ತಡದಿಂದ ಬಳಲುತ್ತಿದ್ದರು. ತಡರಾತ್ರಿಯವರೆಗೂ ಎಸ್‌ಐಆರ್‌ ಕೆಲಸ ಮಾಡುತ್ತಿದ್ದರು’ ಎಂದು ಕುಟುಂಬಸ್ಥರು ದೂಷಿಸಿದ್ದಾರೆ.ಇನ್ನು ‘ಮತಪಟ್ಟಿ ಪರಿಷ್ಕರಣೆ ಕೆಲಸದ ಒತ್ತಡ ತಾಳಲಾಗುತ್ತಿಲ್ಲ’ ಎಂದು ಪತ್ರ ಬರೆದಿಟ್ಟು ಸಹಾಯಕ ಶಿಕ್ಷಕ ಸರ್ವೇಶ್ ಸಿಂಗ್ (46) ಮೊರಾದಾಬಾದ್‌ನಲ್ಲಿ ಆತ್ಮ*ತ್ಯೆ ಮಾಡಿಕೊಂಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಕೊಲ್ಲಿ ಯುದ್ಧದಿಂದ ವಾಣಿಜ್ಯ ಸಿಲಿಂಡರ್‌ ಪೂರೈಕೆಯಲ್ಲಿ ಭಾರಿ ವ್ಯತಯ : ಗ್ಯಾಸ್‌ ಬರದಿದ್ದರೆ ಹೋಟೆಲ್‌ ಬಂದ್‌
ಲೆಬನಾನ್‌ ಮನೆ ಮೇಲೆ ಇಸ್ರೇಲ್‌ ಅಪಾಯಕಾರಿ ಬಿಳಿ ರಂಜಕ ಪ್ರಯೋಗ