37 ಕೋಟಿ ನಗದು ಪತ್ತೆ ಬೆನ್ನಲ್ಲೇ ಜಾರ್ಖಂಡ್‌ ಸಚಿವ ಆಲಂ ಸೆರೆ

KannadaprabhaNewsNetwork |  
Published : May 16, 2024, 12:49 AM ISTUpdated : May 16, 2024, 06:35 AM IST
 Alamgir Alam

ಸಾರಾಂಶ

ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ, ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್‌ ಆಲಂರನ್ನು ಜಾರಿ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಬಂಧಿಸಿದೆ.

ರಾಂಚಿ: ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ, ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್‌ ಆಲಂರನ್ನು ಜಾರಿ  ನಿರ್ದೇಶನಾಲಯ (ಇ.ಡಿ) ಬುಧವಾರ ಬಂಧಿಸಿದೆ. ಇತ್ತೀಚೆಗಷ್ಟೇ ಆಲಂರ ಆಪ್ತ ಕಾರ್ಯದರ್ಶಿ ಸಂಜೀವ್‌ ಕುಮಾರ್‌ರ ಮನೆ ಕೆಲಸದವರ ಮನೆಯಲ್ಲಿ 37 ಕೋಟಿ ರು. ನಗದು ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ಈ ಬಂಧನ ನಡೆದಿದೆ.

ನಗದು ಪತ್ತೆ ಪ್ರಕರಣ ಮಂಗಳವಾರ ಆಲರಂನನ್ನು 9 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು. ಬುಧವಾರ ಮತ್ತೆ 6 ಗಂಟೆ ವಿಚಾರಣೆ ನಡೆಸಿದ ಬಳಿಕ ಈ ಬಂಧನ ಮಾಡಲಾಗಿದೆ.

ಏನು ಪ್ರಕರಣ: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಚಿವರೂ ಸೇರಿ ಅಧಿಕಾರಿಗಳು ವಿವಿಧ ಕಾಮಗಾರಿ ಮತ್ತು ಕೆಲಸ ಮಾಡಿಕೊಡಲು ಕಮಿಷನ್‌ ರೂಪದಲ್ಲಿ ಲಂಚ ಪಡೆದುಕೊಂಡಿದ್ದಾರೆ ಎಂಬುದು ಇಡಿ ಆರೋಪವಾಗಿದೆ. ಇದರ ಸಂಬಂಧ ಕಳೆದ ವಾರ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸಂಜೀವ್‌ ಕುಮಾರ್‌ ಲಾಲ್‌ರನ್ನೂ ಬಂಧಿಸಿತ್ತು. ಜೊತೆಗೆ ಪ್ರಕರಣದ ಸಂಬಂಧ ಇದುವರೆಗೂ ಇಡಿ ಆಲಂಗೀರ್‌ ಆಪ್ತರ ಮನೆಗಳ ಮೇಲೆ ದಾಳಿ ಮಾಡಿ 36.75 ಕೋಟಿ ರು.ಗೂ ಹೆಚ್ಚು ನಗದು ಹಣವನ್ನು ವಶಪಡಿಸಿಕೊಂಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ