ಹೊತ್ತಲ್ಲದ ಹೊತ್ತಲ್ಲಿ ವ್ಯಕ್ತಿಗಳ ವಿಚಾರಣೆ ಬೇಡ : ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ ಸುತ್ತೋಲೆ

KannadaprabhaNewsNetwork |  
Published : Oct 20, 2024, 02:04 AM ISTUpdated : Oct 20, 2024, 04:53 AM IST
ಇಡಿ | Kannada Prabha

ಸಾರಾಂಶ

ಸಮನ್ಸ್‌ ಕೊಟ್ಟು ವಿಚಾರಣೆಗೆ ಕರೆಸಿದ ವ್ಯಕ್ತಿಗಳನ್ನು ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸದಂತೆ ಹಾಗೂ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯಿಸದಂತೆ ತನ್ನ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ ಜಾರಿ ನಿರ್ದೇಶನಾಲಯ (ಇ.ಡಿ.) ಸುತ್ತೋಲೆಯೊಂದನ್ನು ಹೊರಡಿಸಿದೆ.

 ನವದೆಹಲಿ : ಸಮನ್ಸ್‌ ಕೊಟ್ಟು ವಿಚಾರಣೆಗೆ ಕರೆಸಿದ ವ್ಯಕ್ತಿಗಳನ್ನು ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸದಂತೆ ಹಾಗೂ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯಿಸದಂತೆ ತನ್ನ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ ಜಾರಿ ನಿರ್ದೇಶನಾಲಯ (ಇ.ಡಿ.) ಸುತ್ತೋಲೆಯೊಂದನ್ನು ಹೊರಡಿಸಿದೆ.

ತಮ್ಮನ್ನು ವಿಚಾರಣೆಗೆ ಕರೆಸಿದ ಇ.ಡಿ. ಅಧಿಕಾರಿಗಳು ಇಡೀ ರಾತ್ರಿ ವಶದಲ್ಲಿಟ್ಟುಕೊಂಡು, ಪ್ರಶ್ನೆ ಕೇಳಿದ್ದರು. ಮಧ್ಯರಾತ್ರಿ ಬಳಿಕ ಕಾಯಲು ಕೂರಿಸಿದ್ದರು ಎಂದು 64 ವರ್ಷದ ವ್ಯಕ್ತಿಯೊಬ್ಬರು ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದರು. 

ಈ ರೀತಿ ಮಾಡುವುದರಿಂದ ವಿಚಾರಣೆ ಬಂದ ವ್ಯಕ್ತಿ ನಿದ್ರೆಯಿಂದ ವಂಚಿತನಾಗುತ್ತಾನೆ. ಅದು ಕನಿಷ್ಠ ಮಾನವೀಯ ವೈಯಕ್ತಿಕ ಹಕ್ಕು ಎಂದು ಕೋರ್ಟ್‌ ಹೇಳಿತ್ತು. ಅಲ್ಲದೆ ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡುವಂತೆ ಬಾಂಬೆ ಹೈಕೋರ್ಟ್‌ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಅ.11ರಂದು ಸುತ್ತೋಲೆಯನ್ನು ಹೊರಡಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ದೇಶದ ಮೊದಲ ಗಣರಾಜ್ಯೋತ್ಸವ ಸಂಭ್ರಮಕ್ಕೆ ಆಗಿದ್ದ ವೆಚ್ಚ ಎಷ್ಟು ? ಕುತೂಹಲಕಾರಿ ಸಂಗತಿಯಿದು
ಇಂದು ‘ವಂದೇ..’ ಪರಿಕಲ್ಪನೆಯಲ್ಲಿ 77ನೇ ಗಣರಾಜ್ಯ ದಿನ