ವಿಚಾರಣೆಗೆ ಸತತ ಗೈರು; ಕೇಜ್ರಿ ವಿರುದ್ಧ ಇಡಿಯಿಂದ ಹೊಸ ಪ್ರಕರಣ ದಾಖಲು

KannadaprabhaNewsNetwork |  
Published : Mar 07, 2024, 01:50 AM IST
ಅರವಿಂದ್‌ ಕೇಜ್ರಿವಾಲ್‌ | Kannada Prabha

ಸಾರಾಂಶ

ವಿಚಾರಣೆಗೆ ಸತತ 8 ಬಾರಿ ಗೈರಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮೇಲೆ ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದೆ.

ನವದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿರುವ ಎಂಟು ವಿಚಾರಣಾ ಸಮನ್ಸ್‌ಗೆ ಗೈರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಇ.ಡಿ. ದೆಹಲಿ ಸ್ಥಳೀಯ ನ್ಯಾಯಾಲಯದಲ್ಲಿ ಹೊಸ ಪ್ರಕರಣ ದಾಖಲಿಸಿದೆ.

ಕೇಜ್ರಿವಾಲ್‌ ತಮಗೆ ನೀಡಲಾದ 4ರಿಂದ8ನೇ ಸಮನ್ಸ್‌ಗೆ ಗೈರಾಗುವ ಮೂಲಕ ನಿರ್ಲಕ್ಷ್ಯ ತೋರಿದ ಕುರಿತು ಕ್ರಮ ಕೈಗೊಳ್ಳಬೇಕೆಂದು ಅರ್ಜಿಯಲ್ಲಿ ಇ.ಡಿ. ಉಲ್ಲೇಖಿಸಿದೆ.

ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಗುರುವಾರ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ಇದಕ್ಕೂ ಮೊದಲು ಇಡಿ ಮೊದಲ ಮೂರು ಸಮನ್ಸ್‌ಗಳಿಗೆ ಕೇಜ್ರಿವಾಲ್‌ ಗೈರಾಗಿದ್ದಾರೆಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಅದರ ವಿಚಾರಣೆಯು ಮಾ.16ರಂದು ನಡೆಯಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಶಬರಿಮಲೆ ಚಿನ್ನಕ್ಕೆ ಕನ್ನ: ದೇವಸ್ವಂ ಮಾಜಿ ಸದಸ್ಯ ಸೆರೆ
ಷೇರಿಗಿಂತ ಚಿನ್ನ ಬೆಳ್ಳಿ ಹೂಡಿಕೆಯೇ ಹೆಚ್ಚು ಲಾಭ