ಪ್ರಶ್ನೆಗಾಗಿ ಲಂಚ ಕೇಸು: ಮಹುವಾಗೆ ಇ.ಡಿ. ಸಮನ್ಸ್

KannadaprabhaNewsNetwork |  
Published : Mar 28, 2024, 12:50 AM ISTUpdated : Mar 28, 2024, 11:47 AM IST
ಮಹುವಾ | Kannada Prabha

ಸಾರಾಂಶ

ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್‌ ಜಾರಿ ಮಾಡಿದೆ.

ನವದೆಹಲಿ: ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್‌ ಜಾರಿ ಮಾಡಿದೆ.

ಈ ಪ್ರಕರಣದ ವಿದೇಶಿ ವಿನಿಮಯ ಉಲ್ಲಂಘನೆ ಕೇಸಲ್ಲಿ ಮೊದಲು ನೀಡಿದ್ದ ಎರಡು ಸಮನ್ಸ್‌ಗಳಿಗೆ ಮಹುವಾ ಗೈರಾಗಿದ್ದರು. ಬಳಿಕ ಕಳೆದ ಶನಿವಾರವಷ್ಟೇ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. 

ಅಲ್ಲದೆ ಬುಧವಾರದಂದು ಈ ಪ್ರಕರಣದಲ್ಲಿ ಮಹುವಾರ ನಿಕಟವರ್ತಿ ವಕೀಲರೊಬ್ಬರನ್ನು ಇಡಿ ತನಿಖೆಗೊಳಪಡಿಸಿದೆ ಎಂದು ತಿಳಿದುಬಂದಿದೆ. ಮಹುವಾ ಮೊಯಿತ್ರಾ ಅವರು ಕೃಷ್ಣಾನಗರದಿಂದ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಯೋಕಾನ್‌ಗೆ ಕ್ಲೇರ್‌ ಮಜುಂದಾರ್‌ ಉತ್ತರಾಧಿಕಾರಿ
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ: ಮಮತಾ