ಪ್ರಶ್ನೆಗಾಗಿ ಲಂಚ ಕೇಸು: ಮಹುವಾಗೆ ಇ.ಡಿ. ಸಮನ್ಸ್

KannadaprabhaNewsNetwork |  
Published : Mar 28, 2024, 12:50 AM ISTUpdated : Mar 28, 2024, 11:47 AM IST
ಮಹುವಾ | Kannada Prabha

ಸಾರಾಂಶ

ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್‌ ಜಾರಿ ಮಾಡಿದೆ.

ನವದೆಹಲಿ: ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್‌ ಜಾರಿ ಮಾಡಿದೆ.

ಈ ಪ್ರಕರಣದ ವಿದೇಶಿ ವಿನಿಮಯ ಉಲ್ಲಂಘನೆ ಕೇಸಲ್ಲಿ ಮೊದಲು ನೀಡಿದ್ದ ಎರಡು ಸಮನ್ಸ್‌ಗಳಿಗೆ ಮಹುವಾ ಗೈರಾಗಿದ್ದರು. ಬಳಿಕ ಕಳೆದ ಶನಿವಾರವಷ್ಟೇ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. 

ಅಲ್ಲದೆ ಬುಧವಾರದಂದು ಈ ಪ್ರಕರಣದಲ್ಲಿ ಮಹುವಾರ ನಿಕಟವರ್ತಿ ವಕೀಲರೊಬ್ಬರನ್ನು ಇಡಿ ತನಿಖೆಗೊಳಪಡಿಸಿದೆ ಎಂದು ತಿಳಿದುಬಂದಿದೆ. ಮಹುವಾ ಮೊಯಿತ್ರಾ ಅವರು ಕೃಷ್ಣಾನಗರದಿಂದ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು
ಬೀದೀಲಿ ಹೆಣವಾದ ಪುಣೆ ಬಾಂಬ್‌ ಸ್ಫೋಟದ ಉಗ್ರ!