ಮಹಾ ಪರಿಷತ್‌ ಚುನಾವಣೆ: ಬಿಜೆಪಿ ದಿಗ್ವಿಜಯ

KannadaprabhaNewsNetwork |  
Published : Jul 13, 2024, 01:33 AM ISTUpdated : Jul 13, 2024, 06:52 AM IST
ಶಿಂಧೆ | Kannada Prabha

ಸಾರಾಂಶ

ವರ್ಷಾಂತ್ಯದ ವಿಧಾನಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತ ಆಗಿದ್ದ ಮಹಾರಾಷ್ಟ್ರ ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯೂತಿ ಮೈತ್ರಿಕೂಟ (ಬಿಜೆಪಿ-ಶಿಂಧೆ ಶಿವಸೇನೆ-ಎನ್‌ಸಿಪಿ ಅಜಿತ್‌), 11 ಸೀಟುಗಳ ಪೈಕಿ 9ರಲ್ಲಿ ಗೆದ್ದು ದಿಗ್ವಿಜಯ ಸಾಧಿಸಿವೆ.

ಮುಂಬೈ: ವರ್ಷಾಂತ್ಯದ ವಿಧಾನಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತ ಆಗಿದ್ದ ಮಹಾರಾಷ್ಟ್ರ ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯೂತಿ ಮೈತ್ರಿಕೂಟ (ಬಿಜೆಪಿ-ಶಿಂಧೆ ಶಿವಸೇನೆ-ಎನ್‌ಸಿಪಿ ಅಜಿತ್‌), 11 ಸೀಟುಗಳ ಪೈಕಿ 9ರಲ್ಲಿ ಗೆದ್ದು ದಿಗ್ವಿಜಯ ಸಾಧಿಸಿವೆ. ಇದೇ ವೇಳೆ, ಇನ್ನು ಉಳಿದ 2 ಕ್ಷೇತ್ರಗಳಲ್ಲಿ ಮಹಾ ವಿಕಾಸ ಅಘಾಡಿ ಕೂಟ (ಎನ್‌ಸಿಪಿ ಶರದ್-ಕಾಂಗ್ರೆಸ್‌-ಠಾಕ್ರೆ ಶಿವಸೇನೆ) ಗೆದ್ದಿವೆ.

11 ಸೀಟುಗಳಿಗೆ 12 ಅಭ್ಯರ್ಥಿಗಳು ಕಣಕ್ಕಿಳಿಸಿದ್ದರು. ಹೀಗಾಗಿ ಅವಿರೋಧ ಆಯ್ಕೆ ನಡೆಯದೇ ಚುನಾವಣೆ ಏರ್ಪಟ್ಟಿತ್ತು. ಬಿಜೆಪಿ ತಾನು ಸ್ಪರ್ಧಿಸಿದ ಎಲ್ಲ 5, ಶಿಂಧೆ ಶಿವಸೇನೆಯ ಇಬ್ಬರು ಹಾಗೂ ಅಜಿತ್‌ ಎನ್‌ಸಿಪಿಯ ಇಬ್ಬರು ಗೆದ್ದಿದ್ದಾರೆ. ಅಘಾಡಿ 2 ಸೀಟಲ್ಲಿ ಗೆದ್ದಿದ್ದು, ಪವಾರ್‌ ಎನ್‌ಸಿಪಿಯ ಹಿರಿಯ ನಾಯಕ ಜಯಂತ ಪಾಟೀಲ್‌ ಸೋಲು ಕಂಡಿದ್ದಾರೆ.

7-8 ಕಾಂಗ್ರೆಸ್‌ ಶಾಸಕರ ಅಡ್ಡಮತ:

ಈ ನಡುವೆ, 7-8 ಕಾಂಗ್ರೆಸ್‌ ಶಾಸಕರು ಬಿಜೆಪಿ ಪರ ಅಡ್ಡಮತದಾನ ಮಾಡಿದ್ದು, ಇದು ಜಯಂತ ಪಾಟೀಲ್‌ ಸೋಲಿಗೆ ಕಾರಣ ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್‌ ಹಾಗೂ ಅಘಾಡಿಗೆ ಇದು ಭಾರಿ ಹಿನ್ನಡೆ ಆಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ