ಮಹಾ ಪರಿಷತ್‌ ಚುನಾವಣೆ: ಬಿಜೆಪಿ ದಿಗ್ವಿಜಯ

KannadaprabhaNewsNetwork |  
Published : Jul 13, 2024, 01:33 AM ISTUpdated : Jul 13, 2024, 06:52 AM IST
ಶಿಂಧೆ | Kannada Prabha

ಸಾರಾಂಶ

ವರ್ಷಾಂತ್ಯದ ವಿಧಾನಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತ ಆಗಿದ್ದ ಮಹಾರಾಷ್ಟ್ರ ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯೂತಿ ಮೈತ್ರಿಕೂಟ (ಬಿಜೆಪಿ-ಶಿಂಧೆ ಶಿವಸೇನೆ-ಎನ್‌ಸಿಪಿ ಅಜಿತ್‌), 11 ಸೀಟುಗಳ ಪೈಕಿ 9ರಲ್ಲಿ ಗೆದ್ದು ದಿಗ್ವಿಜಯ ಸಾಧಿಸಿವೆ.

ಮುಂಬೈ: ವರ್ಷಾಂತ್ಯದ ವಿಧಾನಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತ ಆಗಿದ್ದ ಮಹಾರಾಷ್ಟ್ರ ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯೂತಿ ಮೈತ್ರಿಕೂಟ (ಬಿಜೆಪಿ-ಶಿಂಧೆ ಶಿವಸೇನೆ-ಎನ್‌ಸಿಪಿ ಅಜಿತ್‌), 11 ಸೀಟುಗಳ ಪೈಕಿ 9ರಲ್ಲಿ ಗೆದ್ದು ದಿಗ್ವಿಜಯ ಸಾಧಿಸಿವೆ. ಇದೇ ವೇಳೆ, ಇನ್ನು ಉಳಿದ 2 ಕ್ಷೇತ್ರಗಳಲ್ಲಿ ಮಹಾ ವಿಕಾಸ ಅಘಾಡಿ ಕೂಟ (ಎನ್‌ಸಿಪಿ ಶರದ್-ಕಾಂಗ್ರೆಸ್‌-ಠಾಕ್ರೆ ಶಿವಸೇನೆ) ಗೆದ್ದಿವೆ.

11 ಸೀಟುಗಳಿಗೆ 12 ಅಭ್ಯರ್ಥಿಗಳು ಕಣಕ್ಕಿಳಿಸಿದ್ದರು. ಹೀಗಾಗಿ ಅವಿರೋಧ ಆಯ್ಕೆ ನಡೆಯದೇ ಚುನಾವಣೆ ಏರ್ಪಟ್ಟಿತ್ತು. ಬಿಜೆಪಿ ತಾನು ಸ್ಪರ್ಧಿಸಿದ ಎಲ್ಲ 5, ಶಿಂಧೆ ಶಿವಸೇನೆಯ ಇಬ್ಬರು ಹಾಗೂ ಅಜಿತ್‌ ಎನ್‌ಸಿಪಿಯ ಇಬ್ಬರು ಗೆದ್ದಿದ್ದಾರೆ. ಅಘಾಡಿ 2 ಸೀಟಲ್ಲಿ ಗೆದ್ದಿದ್ದು, ಪವಾರ್‌ ಎನ್‌ಸಿಪಿಯ ಹಿರಿಯ ನಾಯಕ ಜಯಂತ ಪಾಟೀಲ್‌ ಸೋಲು ಕಂಡಿದ್ದಾರೆ.

7-8 ಕಾಂಗ್ರೆಸ್‌ ಶಾಸಕರ ಅಡ್ಡಮತ:

ಈ ನಡುವೆ, 7-8 ಕಾಂಗ್ರೆಸ್‌ ಶಾಸಕರು ಬಿಜೆಪಿ ಪರ ಅಡ್ಡಮತದಾನ ಮಾಡಿದ್ದು, ಇದು ಜಯಂತ ಪಾಟೀಲ್‌ ಸೋಲಿಗೆ ಕಾರಣ ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್‌ ಹಾಗೂ ಅಘಾಡಿಗೆ ಇದು ಭಾರಿ ಹಿನ್ನಡೆ ಆಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಯು, ಅಮೆರಿಕ ಬಳಿಕ ಇನ್ನೂ 11 ದೇಶದ ಜತೆ ಟ್ರೇಡ್‌ ಡೀಲ್‌
ಆ್ಯಂಥ್ರೋಪಿಕ್‌ ಎಐನಿಂದ ವಿಶ್ವ ಟೆಕ್‌ ಲೋಕದಲ್ಲಿ ಬಿರುಗಾಳಿ!