ಅಬಕಾರಿ ಹಗರಣ: ಕೇಜ್ರಿಗೆ 6ನೇ ಬಾರಿ ಇ.ಡಿ. ಸಮನ್ಸ್‌

KannadaprabhaNewsNetwork |  
Published : Feb 15, 2024, 01:32 AM ISTUpdated : Feb 15, 2024, 12:15 PM IST
ಕೇಜ್ರಿವಾಲ್‌ | Kannada Prabha

ಸಾರಾಂಶ

ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ 6ನೇ ಬಾರಿ ಸಮನ್ಸ್‌ ನೀಡಿದೆ.

ನವದೆಹಲಿ: ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ 6ನೇ ಬಾರಿ ಸಮನ್ಸ್‌ ನೀಡಿದೆ. ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಕೇಜ್ರಿವಾಲ್‌ ಅವರಿಗೆ ಫೆ.19ರಂದು ವಿಚಾರಣೆಗೆ ಹಾಜರಾಗಲು ಇ.ಡಿ. ಸೂಚಿಸಿದೆ.

 ಇ.ಡಿ. ಸಲ್ಲಿಸಿದ್ದ ದೂರಿನ ಅನ್ವಯ ಫೆ.17ರೊಳಗೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಕೋರ್ಟ್‌ ಕಳೆದ ವಾರ ಸೂಚಿಸಿತ್ತು. 

ಇದು ಇ.ಡಿ. ನೀಡುತ್ತಿರುವ 6ನೇ ಸಮನ್ಸ್‌ ಆಗಿದ್ದು, ಈ ಹಿಂದಿನ ಸಮನ್ಸ್‌ಗಳಿಗೆ ಕೇಜ್ರಿವಾಲ್‌ ಉತ್ತರ ನೀಡಿರಲಿಲ್ಲ.

ಈ ಮೊದಲು 2023ರ ನ.2, ಡಿ.21, 2024ರ ಜ.3, ಜ.18, ಫೆ.2ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ತನ್ನದೇ ಸೈನಿಕರ ಸಾಯಲು ಬಿಟ್ಟ ದ್ರೋಹಿ ಪಾಕಿಸ್ತಾನ!
ಶಾಲೇಲಿ ಬ್ಲೇಡಿಂದ ಒಂದೇ ರೀತಿ ಕೈ ಕೊಯ್ದುಕೊಂಡ 35 ಮಕ್ಕಳು!