ಗೆದ್ದರೆ ಮಹಿಳೆಯರಿಗೆ ಒಂದೇ ಕಂತಲ್ಲಿ ₹ 30000 : ಆರ್‌ಜೆಡಿ

KannadaprabhaNewsNetwork |  
Published : Nov 05, 2025, 01:45 AM ISTUpdated : Nov 05, 2025, 05:51 AM IST
Tejashvi Yadav

ಸಾರಾಂಶ

‘ಇಂಡಿಯಾ’ ಸಿಎಂ ಅಭ್ಯರ್ಥಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ‘ನಾವು ಅಧಿಕಾರಕ್ಕೆ ಬಂದರೆ ಮಾಯಿ- ಬೆಹನ್‌ ಯೋಜನೆ ಅಡಿ 30 ಸಾವಿರ ರು.ಗಳನ್ನು ಮಹಿಳೆಯರಿಗೆ ಒಂದೇ ಕಂತಿನಲ್ಲಿ ಸಂಕ್ರಾಂತಿ ವೇಳೆ ನೀಡಲಾಗುವುದು’ ಎಂದು ಘೋಷಿಸಿದ್ದಾರೆ.

  ಪಟನಾ :  ಚುನಾವಣೆ ನಡೆಯುತ್ತಿರುವ ಬಿಹಾರದಲ್ಲಿ ಗ್ಯಾರಂಟಿ ಹಾಗೂ ಉಚಿತ ಕೊಡುಗೆಗಳ ಭರವಸೆ ಮಳೆ ತಾರಕಕ್ಕೇರಿದೆ. ಒಂದು ಬಾರಿಗೆ ಮಹಿಳೆಯರಿಗೆ 10 ಸಾವಿರ ರು. ನೀಡುವ ನಿತೀಶ್‌ ಕುಮಾರ್‌ ಸರ್ಕಾರದ ಯೋಜನೆಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಈಗ ಇದನ್ನು ಮೀರಿಸುವ ನಿಟ್ಟಿನಲ್ಲಿ ವಿಪಕ್ಷದ ‘ಇಂಡಿಯಾ’ ಸಿಎಂ ಅಭ್ಯರ್ಥಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ‘ನಾವು ಅಧಿಕಾರಕ್ಕೆ ಬಂದರೆ ಮಾಯಿ- ಬೆಹನ್‌ ಯೋಜನೆ ಅಡಿ 30 ಸಾವಿರ ರು.ಗಳನ್ನು ಮಹಿಳೆಯರಿಗೆ ಒಂದೇ ಕಂತಿನಲ್ಲಿ ಸಂಕ್ರಾಂತಿ ವೇಳೆ ನೀಡಲಾಗುವುದು’ ಎಂದು ಘೋಷಿಸಿದ್ದಾರೆ.

‘ಮಾಯಿ- ಬೆಹನ್‌ ಯೋಜನೆ

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ತೇಜಸ್ವಿ, ‘ಮಾಯಿ- ಬೆಹನ್‌ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 2,500 ರು.ಗಳನ್ನು ವರ್ಗಾಯಿಸುವುದಾಗಿ ನಾವು ಈಗಾಗಲೇ ಭರವಸೆ ನೀಡಿದ್ದೇವೆ. ಈಗ ಮುಂದಿನ ವರ್ಷ ಜ.14ರಂದು ಮಕರ ಸಂಕ್ರಾಂತಿ ಸಂದರ್ಭದಲ್ಲಿ ಈ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗಳಿಗೆ ಮುಂಗಡವಾಗಿ (ಇಡೀ ವರ್ಷದ) 30,000 ರು.ಗಳನ್ನು ವರ್ಗಾಯಿಸಲಿದ್ದೇವೆ’ ಎಂದರು.

ರೈತರಿಗೆ ಕನಿಷ್ಠ ಬೆಂಬಲ ಬೆಲೆಗಿಂತ ಬೋನಸ್

ಇದೇ ವೇಳೆ, ‘ರಾಜ್ಯದಲ್ಲಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ, ಎಲ್ಲಾ ರೈತರಿಗೆ ಕನಿಷ್ಠ ಬೆಂಬಲ ಬೆಲೆಗಿಂತ (ಎಂಎಸ್‌ಪಿ) ಬೋನಸ್ ಆಗಿ ಪ್ರತಿ ಕ್ವಿಂಟಲ್ ಭತ್ತಕ್ಕೆ 300 ರು. ಮತ್ತು ಗೋಧಿಗೆ 400 ರು. ನೀಡಲಾಗುವುದು’ ಎಂದೂ ಘೋಷಿಸಿದರು.

‘ಪ್ರಸ್ತುತ ಸರ್ಕಾರವು ಕೃಷಿ ಚಟುವಟಿಕೆಗಳಲ್ಲಿ ಬಳಸುವ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ 55 ಪೈಸೆ ದರ ವಿಧಿಸುತ್ತದೆ. ಆದರೆ ನಾವು ರೈತರಿಗೆ ನೀರಾವರಿ ಉದ್ದೇಶಗಳಿಗಾಗಿ ಉಚಿತ ವಿದ್ಯುತ್ ನೀಡುತ್ತೇವೆ’ ಎಂದು ಭರವಸೆ ನೀಡಿದರು.

ಅಲ್ಲದೆ, ಎಲ್ಲ ಪ್ರಾಥಮಿಕ ಕೃಷಿ ಸಾಲ ಸಂಘಗಳು, ಪ್ರಾಥಮಿಕ ಮಾರುಕಟ್ಟೆ ಸಹಕಾರ ಸಂಘಗಳ ಮುಖ್ಯಸ್ಥರಿಗೆ ಜನಪ್ರತಿನಿಧಿಗಳ ಸ್ಥಾನಮಾನ ನೀಡಲಾಗುವುದು ಎಂದೂ ಆಶ್ವಾಸನೆ ನೀಡಿದರು.

PREV
Read more Articles on

Recommended Stories

ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ