ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಬಡವರಿಗೆ, ಅಲ್ಪಸಂಖ್ಯಾತರಿಗಲ್ಲ: ಶಾ

KannadaprabhaNewsNetwork |  
Published : Apr 23, 2024, 12:47 AM ISTUpdated : Apr 23, 2024, 07:49 AM IST
Amith Shah

ಸಾರಾಂಶ

‘ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತ ಸಮುದಾಯದವರಿಗೆ ದೇಶದ ಸಂಪನ್ಮೂಲಗಳಲ್ಲಿ ಮೊದಲ ಹಕ್ಕಿದೆ ಎಂದು ನಂಬಿದೆ.

ಕಂಕರ್ ( ಛತ್ತಿಸಗಢ): ‘ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತ ಸಮುದಾಯದವರಿಗೆ ದೇಶದ ಸಂಪನ್ಮೂಲಗಳಲ್ಲಿ ಮೊದಲ ಹಕ್ಕಿದೆ ಎಂದು ನಂಬಿದೆ. ಆದರೆ ಬಿಜೆಪಿ ಈ ಮಾತನ್ನು ಒಪ್ಪುವುದಿಲ್ಲ.

 ದೇಶದ ಸಂಪನ್ಮೂಲಗಳಲ್ಲಿ ಮೊದಲ ಹಕ್ಕಿರುವುದು ಬಡವರಿಗೆ, ದಲಿತರಿಗೆ , ಆದಿವಾಸಿಗಳಿಗೆ ಮತ್ತು ಹಿಂದುಳಿದ ಸಮುದಾಯದವರಿಗೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಕೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಈ ಮೂಲಕ ರಾಜಸ್ಥಾನ ರ್‍ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ವಿರುದ್ಧ ಮಾಡಿದ ಆರೋಪಗಳನ್ನು ಸಮರ್ಥಿಸಿಕೊಂಡರು.

ಛತ್ತಿಸಗಢದ ಕಂಕರ್ ಕ್ಷೇತ್ರದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಶಾ ,‘ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಛತ್ತಿಸಗಢದಲ್ಲಿ ನಕ್ಸಲಿಸಂ ನಿಗ್ರಹವಾಗುತ್ತಿದೆ. 

ಆದರೆ ಕಾಂಗ್ರೆಸ್ ತನ್ನ ಆಡಳಿತವಧಿಯಲ್ಲಿ ಈ ರೀತಿಯ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನ ಕುಟುಂಬ ರಾಜಕಾರಣ ಬಗ್ಗೆಯೂ ಟೀಕಿಸಿದ ಶಾ , ನಾಲ್ಕು ತಲೆಮಾರುಗಳ ಆಡಳಿತದಲ್ಲಿ ಛತ್ತಿಸಗಢದಲ್ಲಿ ಬಡವರ ಅಭಿವೃದ್ಧಿಗೆ ಕಾಂಗ್ರೆಸ್ ಏನು ಮಾಡಿದೆ ಎಂದು ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ್ದಾರೆ..

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ