ಬಿಕ್ಕಟ್ಟಿನ ನಡುವೆ ನೆರೆರಾಷ್ಟ್ರ ಬಾಂಗ್ಲಾದೇಶಕ್ಕೆ ಭಾರತದ ವಿದೇಶಾಂಗ ಕಾರ್ಯದರ್ಶಿ ಪ್ರವಾಸ

KannadaprabhaNewsNetwork |  
Published : Dec 09, 2024, 12:46 AM ISTUpdated : Dec 09, 2024, 06:12 AM IST
India Flag

ಸಾರಾಂಶ

ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿರುವ ನಡುವೆಯೇ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಅವರು ಸೋಮವಾರ ಢಾಕಾಗೆ 1 ದಿನ ಪ್ರವಾಸ ಕೈಗೊಳ್ಳಲಿದ್ದಾರೆ.

ನವದೆಹಲಿ: ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿರುವ ನಡುವೆಯೇ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಅವರು ಸೋಮವಾರ ಢಾಕಾಗೆ 1 ದಿನ ಪ್ರವಾಸ ಕೈಗೊಳ್ಳಲಿದ್ದಾರೆ.

ಇದು ಹಸೀನಾ ನಿರ್ಗಮನದ ಬಳಿಕ ಭಾರತದ ರಾಜತಾಂತ್ರಿಕರು ಬಾಂಗ್ಲಾಗೆ ಕೈಗೊಳ್ಳುತ್ತಿರುವ ಮೊದಲ ಭೇಟಿಯಾಗಿದ್ದು, ಮಹತ್ವ ಪಡೆದುಕೊಂಡಿದೆ. ಭೇಟಿ ವೇಳೆ ಅವರು ಅಲ್ಲಿನ ವಿದೇಶಾಂಗ ಕಾರ್ಯದರ್ಶಿ ಮೊಹಮ್ಮದ್‌ ಜಶಿಮ್‌ ಉದ್ದಿನ್‌ ಹಾಗೂ ವಿದೇಶಾಂಗ ಸಚಿವ ಮೊಹಮ್ಮದ್‌ ತೌಶಿದ್‌ ಹೌಸೇನ್‌ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಮಿಸ್ರಿ ಅವರು ಅಲ್ಲಿನ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ರನ್ನೂ ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವೇಳೆ ಬಾಂಗ್ಲಾ ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳ ಮೇಲಿನ ದಾಳಿಗಳ ಬಗೆಗಿನ ಭಾರತದ ಕಳವಳವನ್ನು ಮಿಸ್ರಿ ವ್ಯಕ್ತಪಡಿಸುವ ನಿರೀಕ್ಷೆಯಿದ್ದು, ಅತ್ತ ಬಾಂಗ್ಲಾ ಕೂಡ ಭಾರತದಲ್ಲಿ ಆಶ್ರಯ ಪಡೆಯುತ್ತಿರುವ ಶೇಖ್‌ ಹಸೀನಾರ ಹಸ್ತಾಂತರಕ್ಕೆ ಆಗ್ರಹಿಸುವ ಸಾಧ್ಯತೆ ಇದೆ.

ಭಾರತ ಪರ ಪ್ರಧಾನಿ ಎಂದು ಗುರುತಿಸಿಕೊಂಡಿದ್ದ ಹಸೀನಾ ಅಧಿಕಾರ ಕಳೆದುಕೊಂಡ ಬಳಿಕ ಅಲ್ಲಿನ ಹಿಂದೂಗಳು ಹಾಗೂ ದೇವಸ್ಥಾನಗಳ ಮೇಲಿನ ದಾಳಿಗಳು ಹೆಚ್ಚಿದ್ದು, ಇತ್ತೀಚೆಗೆ ಇಸ್ಕಾನ್‌ ಸನ್ಯಾಸಿಯ್ನನೂ ದೇಶದ್ರೋಹಿಯೆಂದು ಬಂಧಿಸಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ