ಲೋಕಪಾಲ ಮುಖ್ಯಸ್ಥರಾಗಿ ನ್ಯಾ। ಖಾನ್ವಿಲ್ಕರ್‌ ನೇಮಕ, ಸದಸ್ಯರಾಗಿ ನ್ಯಾ। ಸ್ವಾಮಿ

KannadaprabhaNewsNetwork |  
Published : Feb 28, 2024, 02:31 AM IST
ಎ ಎಂ ಖಾನ್ವಿಲ್ಕರ್‌ | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಮಟ್ಟದಲ್ಲಿ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡುವ ಲೋಕಪಾಲ ಸಂಸ್ಥೆ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಾಧೀಶ ನ್ಯಾ। ಎ.ಎಂ. ಖಾನ್ವಿಲ್ಕರ್‌ ನೇಮಕಗೊಂಡಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಮಟ್ಟದಲ್ಲಿ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡುವ ಲೋಕಪಾಲ ಸಂಸ್ಥೆ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಾಧೀಶ ನ್ಯಾ। ಎ.ಎಂ. ಖಾನ್ವಿಲ್ಕರ್‌ ನೇಮಕಗೊಂಡಿದ್ದಾರೆ.

ಇವರೊಂದಿಗೆ ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ನ್ಯಾ। ಲಿಂಗಪ್ಪ ನಾರಾಯಣ ಸ್ವಾಮಿ, ಕರ್ನಾಟಕ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಾಧೀಶ ನ್ಯಾ। ರಿತುರಾಜ್‌ ಅವಸ್ಥಿ ಹಾಗೂ ನ್ಯಾ।ಸಂಜಯ್‌ ಯಾದವ್‌ ಅವರನ್ನು ನ್ಯಾಯಾಂಗ ಸದಸ್ಯರಾಗಿ ನೇಮಿಸಲಾಗಿದೆ.

ಇನ್ನು ನ್ಯಾಯಾಂಗೇತರ ಸದಸ್ಯರಾಗಿ ಸುಶೀಲ್ ಚಂದ್ರ, ಪಂಕಜ್‌ ಕುಮಾರ್‌ ಹಾಗೂ ಅಜಯ್‌ ತಿರ್ಕೆರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶಿಸಿದೆ. ಈ ಹಿಂದೆ ಪ್ರದೀಪ್‌ ಕುಮಾರ್‌ ಮೊಹಂತಿ ಮುಖ್ಯಸ್ಥರಾಗಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2025 ಸುಧಾರಣೆಗಳ ಸಾರ್ಥಕ ವರ್ಷ: ಮೋದಿ ಹರ್ಷ
ಪತ್ರಕರ್ತರ ಹಿತರಕ್ಷಣೆಗೆ ಐಎಫ್‌ಡಬ್ಲ್ಯುಜೆ ಆಗ್ರಹ